ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

Date:

ಕಳೆದ ಎರಡ್ಮೂರು ದಿನದಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಈಗ ಮತ್ತೆ ಸುರಿಯಲಿದ್ದಾನೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಮತ್ತೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಕಡಲ ತೀರದ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಡಿಸೆಂಬರ್ ತಿಂಗಳಲ್ಲಿ ಮತ್ತೆ ವಾಯುಭಾರ ಕುಸಿತವಾಗಲಿದ್ದು, ಈ ಹಿನ್ನೆಲೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರ ಭಾಗಕ್ಕೆ ಇದು ಎಫೆಕ್ಟ್ ಆಗಲಿದ್ದು, ಕರ್ನಾಟಕಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ ಎನ್ನಲಾಗಿದೆ.

ಇನ್ನು ಈ ಮಳೆ ಬಗ್ಗೆ ಮಾತನಾಡಿರುವ ಹವಮಾನ ತಜ್ಞರಾದಂತ ಡಾ. ಆರ್ ಎಚ್ ಪಾಟೀಲ್, ಇನ್ನು ಎರಡು ದಿನ ಬಿಸಿಲು ಬರುವುದು ಕಡಿಮೆ. ಹೀಗೆ ಮೋಡ ಕವಿದ ವಾತಾವರಣ ಎಲ್ಲೆಡೆ ಇರಲಿದೆ. ಆದ್ರೆ ಮಳೆಯಾಗುವ ಸಾಧ್ಯತೆ ಕಡಿಮೆ ಎಂದಿದ್ದಾರೆ.

ಈಗಾಗಲೇ ನಿರಂತರವಾಗಿ ಸುರಿದ ಮಳೆಯಿಂದಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ಈಗಾಗಲೇ ಕೈಗೆ ಬರಬೇಕಾಗಿದ್ದ ಬೆಳೆ ಸಂಪೂರ್ಣವಾಗಿ ನೀರಿನಲ್ಲಿ ಹೋಮವಾಗಿದೆ. ಬೆಳೆ ನಾಶದಿಂದಾಗಿ ಸಾಲ ತಲೆ‌ಮೇಲೆ ಬಂದಿದೆ. ಇದರ ನಷ್ಟವನ್ನೇ ರೈತನಿಂದ ತೀರಿಸಲು ಸಾಧ್ಯವಾಗ್ತಾ ಇಲ್ಲ. ಇನ್ನು ಮತ್ತೆ ಮಳೆ ಬಂದರೆ ಇರುವ ಅಷ್ಟೊ ಇಷ್ಟೋ ಬೆಳೆಯೂ ನಾಶವಾಗುವ ಸಾಧ್ಯತೆ ಇದೆ. ಹೀಗಾಗಿ ಮಳೆ ಬಾರದೆ ಇದ್ದರೆ ಉತ್ತಮ ಎಂದು ರೈತ ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾನೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...