ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕಹಿಸುದ್ದಿ

Date:

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಅನುಕೂಲವಾಗುವಂತೆ ಸರ್ಕಾರ ವರ್ಗಾವಣೆ ಕಾಯ್ದೆಯನ್ನು ಎರಡು ಬಾರಿ ತಿದ್ದುಪಡಿ ಮಾಡಿದ್ದರೂ, ಹೆಚ್ಚಿನ ಶಿಕ್ಷಕರಿಗೆ ಅನುಕೂಲವಾಗಿಲ್ಲ ಎನ್ನಲಾಗಿದೆ.

ಶೇಕಡ 25 ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಇರುವ 53 ತಾಲೂಕುಗಳನ್ನು ವರ್ಗಾವಣೆ ವ್ಯಾಪ್ತಿಯಿಂದ ಹೊರಗೆ ಇಟ್ಟಿರುವುದರಿಂದ ರಾಜ್ಯದ ಸುಮಾರು 50,000 ಶಿಕ್ಷಕರಿಗೆ ವರ್ಗಾವಣೆಯ ಅವಕಾಶ ಇಲ್ಲವಾಗಿದೆ ಎಂದು ಹೇಳಲಾಗಿದೆ.

ಪತಿ-ಪತ್ನಿಯರಿಗೆ ಕೂಡ ನಿರಾಸೆಯಾಗಿದೆ. ಪತಿ, ಪತ್ನಿ ವರ್ಗಾವಣೆ ಪ್ರಕರಣದಲ್ಲಿ ತಾಲೂಕಿನ ಒಳಗೆ ನಿಗದಿತ ವಿಷಯದ ಶಿಕ್ಷಕರ ಹುದ್ದೆ ಖಾಲಿ ಇಲ್ಲ ಎಂಬ ಕಾರಣಕ್ಕೆ ನೂರಾರು ಶಿಕ್ಷಕರ ವರ್ಗಾವಣೆ ಅವಕಾಶದಿಂದ ವಂಚಿತರಾಗಿದ್ದಾರೆ.

ಶಿಕ್ಷಕರ ಹುದ್ದೆ ಕೊರತೆಯಾಗಬಾರದು ಎಂಬ ಕಾರಣಕ್ಕೆ ಶೇಕಡ 25ರಷ್ಟು ಶಿಕ್ಷಕರ ಹುದ್ದೆ ಖಾಲಿ ಇರುವ 53 ತಾಲ್ಲೂಕುಗಳನ್ನು ವರ್ಗಾವಣೆಯಿಂದ ಪ್ರಕ್ರಿಯೆಯಿಂದ ಹೊರಗಿಡಲಾಗಿದ್ದು, ಇಂತಹ ತಾಲೂಕುಗಳಲ್ಲಿ ಕೆಲಸ ಮಾಡುತ್ತಿರುವ 50 ಸಾವಿರಕ್ಕೂ ಅಧಿಕ ಶಿಕ್ಷಕರ ವರ್ಗಾವಣೆಗೆ ಅವಕಾಶ ಸಿಕ್ಕಿಲ್ಲ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಇದರಿಂದಾಗಿ ಗೊಂದಲ ಮುಂದುವರೆದಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ!

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ! ಬೆಂಗಳೂರು: ಕೋಟಿ...

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ ದಕ್ಷಿಣ ಕನ್ನಡ:...

ಮಧುಮೇಹದ ಮುನ್ನ ಬರುವ ಲಕ್ಷಣಗಳು: ನಿರ್ಲಕ್ಷ್ಯ ಮಾಡಿದರೆ ಅಪಾಯ ಗಂಭೀರ

ಮಧುಮೇಹದ ಮುನ್ನ ಬರುವ ಲಕ್ಷಣಗಳು: ನಿರ್ಲಕ್ಷ್ಯ ಮಾಡಿದರೆ ಅಪಾಯ ಗಂಭೀರ ಇತ್ತೀಚಿನ ದಿನಗಳಲ್ಲಿ...

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

‌ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌ ಬೆಂಗಳೂರು: ಸಿಲಿಕಾನ್‌...