MES ವಿರುದ್ಧ ದನಿ ಎತ್ತಿದ ರಚಿತಾ ರಾಮ್

Date:

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್​) ಕಾರ್ಯಕರ್ತರ ಮಿತಿ ಮೀರಿದ ಪುಂಡಾಟಿಕೆ ಬಗ್ಗೆ ಇಡೀ ಕರ್ನಾಟಕವೇ ಗರಂ ಆಗಿದೆ.

ಕನ್ನಡ ಚಿತ್ರರಂಗದ ಅನೇಕರು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟಿ ರಚಿತಾ ರಾಮ್​ (Rachita Ram) ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಖಿಲ್​ ಕುಮಾರಸ್ವಾಮಿ ನಟನೆಯ ‘ರೈಡರ್​’ ಸಿನಿಮಾದ (Rider Movie) ಪ್ರೀ-ರಿಲೀಸ್​ ಕಾರ್ಯಕ್ರಮದಲ್ಲಿ ಅವರು ಭಾಗಿ ಆಗಿದ್ದರು. ಈ ವೇಳೆ ‘ಟಿವಿ9 ಕನ್ನಡ’ದ ಜತೆ ಮಾತನಾಡಿದ ಅವರು ಕೆಲವು ವಿಷಯಗಳನ್ನು ಹಂಚಿಕೊಂಡರು.

‘ಖಂಡಿತ ಇದು ಬೇಜಾರಾಗುವಂತಹ ಸಂದರ್ಭ. ಕೆಲವೊಂದು ವಿಷಯವನ್ನು ಮಾತಿನಲ್ಲಿ ಹೇಳೋಕೆ ಆಗಲ್ಲ. ಎಲ್ಲರಿಗೂ ಪ್ರೀತಿ ನೀಡುವವರು ನಾವು. ನಮ್ಮ ಬೆನ್ನಿಗೆ ಚೂರಿ ಹಾಕುವಂತಹ ಕೆಲಸ ಮಾಡಿದಾಗ ಬೇಜಾರು ಆಗುತ್ತೆ. ಬೇಜಾರು ಆಗಿದೆ ಅಂತ ನಾವು ಸುಮ್ಮನೆ ಕೂರುವಂತಿಲ್ಲ. ನಮ್ಮನ್ನು ಕೆಣಕಿ ರೋಷ ಬರುವಂತೆ ಮಾಡಲಾಗಿದೆ. ಇದರ ಬಗ್ಗೆ ದೊಡ್ಡವರು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ನನ್ನ ಬೆಂಬಲ ಇದಕ್ಕೆ ಇದ್ದೇ ಇರುತ್ತದೆ’ ಎಂದು ರಚಿತಾ ರಾಮ್​ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...