ಅಭಿಮಾನಿ ಜೊತೆ ಪಾಂಡ್ಯ ನಡವಳಿಕೆಗೆ ಆಕ್ರೋಶ

Date:

2021ನೇ ವರ್ಷದಲ್ಲಿ ಕೇಳಿಬಂದ ಕ್ರಿಕೆಟಿಗರ ವಿವಾದಗಳು ಒಂದೆರಡಲ್ಲ. ಒಂದೆಡೆ ಟಿಮ್ ಪೇನ್ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕಾಗಿ ಆಸ್ಟ್ರೇಲಿಯಾ ತಂಡದ ನಾಯಕತ್ವವನ್ನು ಕಳೆದುಕೊಂಡರೆ, ಮತ್ತೊಂದೆಡೆ ಸರಿಯಾದ ಕಾರಣಗಳನ್ನು ಪಡೆಯದ ವಿರಾಟ್ ಕೊಹ್ಲಿ ಕೂಡ ಭಾರತ ಏಕದಿನ ತಂಡದ ನಾಯಕತ್ವವನ್ನು ಕಳೆದುಕೊಂಡರು. ಹೀಗೆ ವಿರಾಟ್ ಕೊಹ್ಲಿ ನಾಯಕತ್ವವನ್ನು ಕಳೆದುಕೊಂಡದ್ದು ಎಷ್ಟು ದೊಡ್ಡ ಮಟ್ಟದ ವಿವಾದ ಹಾಗೂ ಟೀಕೆಗಳಿಗೆ ಕಾರಣವಾಯಿತು ಎಂಬುದನ್ನು ಬಿಡಿಸಿಹೇಳುವ ಅಗತ್ಯವಿಲ್ಲ. ಹೀಗೆ ಕ್ರಿಕೆಟ್ ಜಗತ್ತಿನಲ್ಲಿ ಈ ವರ್ಷ ಹಲವಾರು ದೊಡ್ಡ ದೊಡ್ಡ ವಿವಾದಗಳು ನಡೆದಿವೆ. ಹೀಗೆ ದೊಡ್ಡ ವಿವಾದಗಳ ನಡುವೆ ಕ್ರಿಕೆಟಿಗರು ಅನಗತ್ಯ ಹೆಜ್ಜೆಗಳ ಇಡುವುದರ ಮೂಲಕ ಚಿಕ್ಕ ಚಿಕ್ಕ ತಪ್ಪುಗಳನ್ನು ಮಾಡಿ ವಿವಾದಗಳನ್ನು ಮಾಡಿಕೊಂಡಿದ್ದೂ ಕೂಡ ಉಂಟು. ಇದಕ್ಕೆ ತಾಜಾ ಉದಾಹರಣೆಯೆಂದರೆ ಹಾರ್ದಿಕ್ ಪಾಂಡ್ಯ.

2016ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದುಕೊಂಡ ಹಾರ್ದಿಕ್ ಪಾಂಡ್ಯ ಸಾಲು ಸಾಲು ಉತ್ತಮ ಪ್ರದರ್ಶನಗಳನ್ನು ನೀಡುವುದರ ಮೂಲಕ ಟೀಂ ಇಂಡಿಯಾದ ಖಾಯಂ ಸದಸ್ಯನಾಗಿದ್ದರು. ಆದರೆ ಕಾಲಕ್ರಮೇಣ ಗಾಯದ ಸಮಸ್ಯೆಗೆ ಒಳಗಾದ ಹಾರ್ದಿಕ್ ಪಾಂಡ್ಯ ಒಮ್ಮೆಯೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡು ಕಣಕ್ಕಿಳಿಯಲು ನಾನು ಸಿದ್ಧ ಎಂದು ಮುಂದೆ ಬರಲೇ ಇಲ್ಲ. ಕಾಲ ಕಳೆದಂತೆ ತನ್ನ ಗಾಯದ ತೀವ್ರತೆ ಹೆಚ್ಚಾಗುತ್ತಿರುವ ಕಾರಣದಿಂದ ಟೀಮ್ ಇಂಡಿಯಾದಲ್ಲಿ ತನ್ನ ಸ್ಥಾನವನ್ನು ಕೂಡ ಕಳೆದುಕೊಂಡಿರುವ ಹಾರ್ದಿಕ್ ಪಾಂಡ್ಯ ಇದೀಗ ಮತ್ತೆ ತಂಡ ಸೇರಬೇಕೆಂದರೆ ಸಂಪೂರ್ಣವಾಗಿ ಫಿಟ್ ಆಗಿ ಬರಬೇಕಿದೆ.

ಹೀಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಕಳೆದುಕೊಂಡು ಹೊರಬಿದ್ದಿರುವ ಹಾರ್ದಿಕ್ ಪಾಂಡ್ಯ ಇತ್ತೀಚೆಗಷ್ಟೇ ರೆಸ್ಟೋರೆಂಟ್ ಒಂದಕ್ಕೆ ಭೇಟಿ ನೀಡಿದ್ದರು. ಹಾರ್ದಿಕ್ ಪಾಂಡ್ಯ ರೆಸ್ಟೋರೆಂಟ್‌ನಿಂದ ಹೊರಬರುತ್ತಿದ್ದಂತೆಯೇ ಸಾಮಾನ್ಯವಾಗಿ ಅನೇಕ ಕ್ರಿಕೆಟ್ ಅಭಿಮಾನಿಗಳು ಅವರ ಜತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಅಭಿಮಾನಿಗಳು ಗುಂಪಿನಲ್ಲಿ ಬಂದರೂ ಕೂಡ ಫೋಟೋ ತೆಗೆದುಕೊಳ್ಳಲು ಅನುಮತಿ ನೀಡಿದ ಹಾರ್ದಿಕ್ ಪಾಂಡ್ಯ ಅಭಿಮಾನಿಯೊರ್ವನ ಜೊತೆ ವರ್ತಿಸಿದ ರೀತಿ ಇದೀಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಅಭಿಮಾನಿಯೋರ್ವ ಹಾರ್ದಿಕ್ ಪಾಂಡ್ಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದಾಗ ಹಾರ್ದಿಕ್ ಪಾಂಡ್ಯ ಹೆಗಲಿನ ಮೇಲೆ ತನ್ನ ಕೈಯನ್ನು ಹಾಕಿದ್ದಾನೆ. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಹಾರ್ದಿಕ್ ಪಾಂಡ್ಯ ಆತನ ಕೈಯನ್ನು ತನ್ನ ಹೆಗಲಿನಿಂದ ತೆಗೆದುಹಾಕಿದ್ದಾರೆ. ಇದನ್ನು ಅಲ್ಲಿಯೇ ನೆರೆದಿದ್ದ ಮತ್ತೋರ್ವ ಕ್ರಿಕೆಟ್ ಅಭಿಮಾನಿ ವಿಡಿಯೋ ಮಾಡಿಕೊಂಡಿದ್ದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹೀಗೆ ಹಾರ್ದಿಕ್ ಪಾಂಡ್ಯ ನಡೆದುಕೊಂಡಿರುವ ರೀತಿಗೆ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ವಿಡಿಯೋದಲ್ಲಿ ಹಾರ್ದಿಕ್ ಪಾಂಡ್ಯ ನಡೆದುಕೊಂಡಿರುವ ರೀತಿಯನ್ನು ಕಂಡ ಕೆಲ ನೆಟ್ಟಿಗರು ಕ್ರಿಕೆಟರ್ ಎಂದ ಮಾತ್ರಕ್ಕೆ ಜನಸಾಮಾನ್ಯನ ಜೊತೆ ಈ ರೀತಿ ವರ್ತಿಸುವುದು ಸರಿಯಲ್ಲ, ಹಾರ್ದಿಕ್ ಪಾಂಡ್ಯಗೆ ದುರಹಂಕಾರ ಹೆಚ್ಚಿದೆ, ಅಭಿಮಾನಿಗಳ ಜೊತೆ ಹೀಗಾ ನಡೆದುಕೊಳ್ಳೋದು ಎಂದೆಲ್ಲಾ ಕಿಡಿಕಾರಿದ್ದಾರೆ. ಒಂದಿಷ್ಟು ವರ್ಗ ಹಾರ್ದಿಕ್ ಪಾಂಡ್ಯ ನಡೆಯ ಕುರಿತು ವಿರೋಧ ವ್ಯಕ್ತಪಡಿಸುತ್ತಿದ್ದರೆ ಮತ್ತೊಂದಷ್ಟು ನೆಟ್ಟಿಗರು ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಯ ಕುರಿತು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ದೇಶದಾದ್ಯಂತ ವೈರಸ್ ಹಾವಳಿ ಹೆಚ್ಚಾಗುತ್ತಿದೆ, ಇಂತಹ ಸಂದರ್ಭದಲ್ಲಿ ಅಪರಿಚಿತರು ಬಂದು ಹೆಗಲ ಮೇಲೆ ಕೈ ಹಾಕಿದರೆ ಯಾರೇ ಆದರೂ ಇದೇ ರೀತಿ ನಡೆದುಕೊಳ್ಳಬೇಕು. ಅಷ್ಟೇ ಅಲ್ಲದೆ ಅಭಿಮಾನಿ ಎಂದ ಮಾತ್ರಕ್ಕೆ ಹೇಗೆ ಬೇಕೆಂದರೆ ಹಾಗೆ ವರ್ತಿಸುವ ಹಾಗಿಲ್ಲ, ದೇಶದಲ್ಲಿ ಎಂಥ ಪರಿಸ್ಥಿತಿ ಇದೆ ಯಾವ ರೀತಿ ನಡೆದುಕೊಳ್ಳಬೇಕು ಎಂಬುದನ್ನು ಅಭಿಮಾನಿಗಳು ಆಲೋಚಿಸಬೇಕು ಎಂದು ಕೆಲ ನೆಟ್ಟಿಗರು ಹಾರ್ದಿಕ್ ಪಾಂಡ್ಯ ಪರ ಬ್ಯಾಟ್ ಬೀಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...