ಮತ್ತೆ ಲಾಕ್ ಡೌನ್ ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ

Date:

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ತಜ್ಞರ ಅಭಿಪ್ರಾಯ ಪಡೆದು ಮತ್ತೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಬೇಕೆ? ಎಂದು ಶೀಘ್ರವೇ ತೀರ್ಮಾನಿಸಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನೆರೆ ರಾಜ್ಯ ತೆಲಂಗಾಣದಲ್ಲಿ ಈಗಾಗಲೇ ಶಾಲೆಗಳನ್ನು ಬಂದ್ ಮಾಡಲಾಗಿದೆ.

ಸದ್ಯಕ್ಕೆ ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಂಗಳವಾರ ಸಂಜೆ ತಜ್ಞರ ಸಭೆ ಕರೆದು ಚರ್ಚಿಸಲಾಗುವುದು. ಲಾಕ್​ಡೌನ್, ಸೆಮಿಲಾಕ್… ಏನು ಮಾಡಿದರೆ ಉತ್ತಮ ಎಂಬುದನ್ನು ತಜ್ಞರ ಸಲಹೆ ಪಡೆದು ನಿರ್ಧರಿಸಲಾಗುವುದು. ಹಿಂದೆ ಲಾಕ್​ಡೌನ್​ದಿಂದ ಜನರು ಸಮಸ್ಯೆ ಅನುಭವಿಸಿದ್ದಾರೆ. ಆರ್ಥಿಕ ಚಟುವಟಿಕೆಗಳು ನಡೆಯಬೇಕು. ಕೋವಿಡ್ ನಿಯಂತ್ರಣದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎನ್ನುವ ಮೂಲಕ ಲಾಕ್​ಡೌನ್ ಮಾಡಲ್ಲ ಎಂಬ ಮುನ್ಸೂಚನೆಯನ್ನ ಸಿಎಂ ನೀಡಿದರು.

ವಿಶ್ವ ಆರೋಗ್ಯ ಸಂಸ್ಥೆಯು ಅನೇಕ ಮಾರ್ಗದರ್ಶನ ನೀಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯೇ ರಾಜ್ಯದಲ್ಲಿಯೂ ಜಾರಿಯಲ್ಲಿದೆ. ನೆರೆಯ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಪ್ರಕರಣಗಳು ಹೆಚ್ಚಾಗಿವೆ. ಹೀಗೆ ಪಕ್ಕದ ರಾಜ್ಯದಲ್ಲಿ ಹೆಚ್ಚಾದಾಗ ನಮ್ಮ ರಾಜ್ಯದಲ್ಲಿ ಹೆಚ್ಚಾಗುವುದು ಸಹಜ. ಇದರ ಬಗ್ಗೆ ಕಟ್ಟೆಚ್ಚರ‌ ವಹಿಸಿ, ಗಡಿಗಳನ್ನು ಬಿಗಿ ಮಾಡಲಾಗಿದೆ ಎಂದು ಸಿಎಂ ಹೇಳಿದರು. ಜನರೇ ಇನ್ನಷ್ಟು ಕಟ್ಟೆಚ್ಚರ ವಹಿಸಬೇಕು ಎಂದು ಕೋರಿದರು.

ಒಂದು ವಾರದಿಂದ ಕರೊನಾ ಹಾಗೂ ಒಮಿಕ್ರಾನ್ ಪ್ರಕರಣ ಹೆಚ್ಚಾಗಿವೆ. ಮೂರನೇ ಅಲೆ ನಿಭಾಯಿಸಲು ಬೇಕಾದ ಔಷಧ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್ ತುರ್ತು ನೋಟಿಸ್

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್...

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ ಬೆಂಗಳೂರು:...

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ...

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು!

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು! ಇತ್ತೀಚಿನ ದಿನಗಳಲ್ಲಿ...