No menu items!
8.8 C
Munich
Sunday, April 26, 2026

ರೈಲು ಅಪಘಾತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

Must read

ಪಶ್ಚಿಮ ಬಂಗಾಳದ ಜುಲ್ವೈಗುರಿ ಜಿಲ್ಲೆಯಲ್ಲಿ ಸಂಭವಿಸಿದ ಬಿಕನೇರ್-ಗುವಾಹಟಿ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕೇರಿದೆ ಎಂದು ಈಶಾನ್ಯ ಗಡಿ ರೈಲ್ವೈ (ಎನ್‍ಎಫ್‍ಆರ್) ವಕ್ತಾರರು ಇಂದಿಲ್ಲಿ ತಿಳಿಸಿದ್ದಾರೆ. ಮೃತರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ನಿನ್ನೆ ಜಲ್ವೈಗುರಿ ಜಿಲ್ಲೆಯಲ್ಲಿ ಚಿಕನೇರ್-ಗುವಾಹಟಿ ಎಕ್ಸ್‍ಪ್ರೆಸ್ ರೈಲಿನ ಹನ್ನೆರಡು ಬೋಗಿಗಳು ಹಳಿ ತಪ್ಪಿದವು. ಅವುಗಳಲ್ಲಿ ಕೆಲವು ಬುಡಮೇಲಾಗಿ ಬಿದ್ದವು. ಘಟನೆ ಡೋಮೋಹನಿ ಸಮೀಪ ಜರುಗಿತ್ತು.

ಪ್ರಸ್ತುತ ಗಾಯಗೊಂಡವರ ಸಂಖ್ಯೆ 36 ಇದೆ. 23 ಪ್ರಯಾಣಿಕರು ಜಲ್ವೈಗುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರು ಮಂದಿಯನ್ನು ನಾರ್ತ್‍ಬೆಂಗಾಲ್ ಮೆಡಿಕಲ್ ಕಾಲೇಜ್ ಮತ್ತು ಏಳು ಜನರನ್ನು ಮೈನಗುರಿ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article