ವೀಕೆಂಡ್ ಕರ್ಫ್ಯೂ ಅಂತ್ಯ: ಆದರೆ ಮತ್ತಷ್ಟು ಕಠಿಣ ನಿಯಮಕ್ಕೆ ತಯಾರಾಗಿ!

Date:

ರಾಜ್ಯದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು.

ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಲಿದ್ದು, ಸಚಿವರಾದ ಆರ್.ಅಶೋಕ್, ಡಾ.ಕೆ. ಸುಧಾಕರ್, ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಕೊರೋನಾ ತಡೆಗೆ ರಾಜ್ಯದಲ್ಲಿ ಸದ್ಯ ವಿಧಿಸಲಾಗಿರುವ ಕಠಿಣ ನಿಯಮಗಳು ಜನವರಿ 19 ಕ್ಕೆ ಅಂತ್ಯವಾಗಲಿವೆ. ಜನವರಿ 31 ರ ವರೆಗೆ ಅನೇಕ ನಿಯಮಗಳು ಮುಂದುವರೆಯಲಿವೆ. ಜ. 17 ರ ಇಂದು ಬೆಳಗ್ಗೆ 5 ಗಂಟೆಗೆ ವೀಕೆಂಡ್ ಕರ್ಫ್ಯೂ ಕೂಡ ಮುಕ್ತಾಯವಾಗಿದೆ.

ಸಭೆಯಲ್ಲಿ ವೀಕೆಂಡ್ ಕರ್ಫ್ಯೂ, ಕಠಿಣ ನಿಯಮಗಳನ್ನು ಮುಂದುವರೆಸುವ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ಅಲ್ಲದೆ, ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ನಿರ್ಬಂಧ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...