ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ

Date:

ಬೆಂಗಳೂರು : ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ನಗರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷೆ ಅಥವಾ ಸಿಎಂ‌ ಆಗಿ ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಖಂಡಿತಾ ಇಲ್ಲ ಎಂದಿದ್ದಾರೆ. ನಾನು ಮೊನ್ನೆ ಮೊನ್ನೆ ಸಚಿವೆ ಆಗಿದ್ದೇನೆ.

 

 

 

 

 

ಬೇರೆ ಬೇರೆ ಕಡೆ ಪ್ರವಾಸ ಮಾಡುತ್ತಿದ್ದೇನೆ. ರಾಜ್ಯ ರಾಜಕಾರಣಕ್ಕೆ ಬರೋದೆಲ್ಲ ಕೇವಲ ಊಹಾಪೋಹ ಮಾತ್ರ. ದೇಶದಲ್ಲಿ ರೈತರಿಗೆ ಸಹಾಯವಾಗುವ ಕೆಲಸ ಮಾಡಲು ಬಯಸುತ್ತಿದ್ದೇನೆ. ಸದ್ಯ ಆ ರೀತಿಯ ಯಾವುದೇ ಚಿಂತನೆ ಇಲ್ಲ ಎಂದು ರಾಜ್ಯ ರಾಜಕಾರಣ ಪ್ರವೇಶ ವಿಷಯವನ್ನು ತಳ್ಳಿ ಹಾಕಿದರು. ಪಠ್ಯ ಪುಸ್ತಕ ವಿಚಾರದಲ್ಲಿ ಕುವೆಂಪು, ಬಸವಣ್ಣ ಅವರನ್ನು ಅವಹೇಳನ ಮಾಡಿರುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಬಸವಣ್ಣ, ಕುವೆಂಪು ಇಬ್ಬರಿಗೂ ಅವಮಾನ ಮಾಡುವ ವಿಚಾರವೇ ಇಲ್ಲ. ಸರ್ಕಾರ ಕುವೆಂಪು ಅವರಿಗೆ ಗೌರವ ಕೊಡುತ್ತಿದೆ. ಬಸವಣ್ಣ ಅಂದರೆ ವಿಶೇಷ ಗೌರವ ಇದೆ. ಪ್ರತೀ ಕಾರ್ಯಕ್ರಮದಲ್ಲಿ ಅವರನ್ನು ಪೂಜಿಸಲಾಗುತ್ತಿದೆ. ಪ್ರತಿ ಭಾರಿಯೂ ಅವರನ್ನು ಬಸವಣ್ಣ ಎಂದು ಕರೆಯುವ ಕೆಲಸ ಮಾಡೋಣ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...