ರಿಯಲ್ ಎಸ್ಟೇಟ್​ ಹೆಸರಿನಲ್ಲಿ ವಂಚಿಸಿದಕ್ಕೆ ನಿರ್ಮಾಪಕನ ಬಂಧನ

Date:

ಬೆಂಗಳೂರು : ಸಿನಿಮಾಗೆ ಬಂಡವಾಳ ಹಾಕಿ ಲಾಸ್ ಆದ ಬಳಿಕ ಅಡ್ಡದಾರಿ ಹಿಡಿದಿದ್ದ ಸ್ಯಾಂಡಲ್ ವುಡ್ ನಿರ್ಮಾಪಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಸೇರಿ ನಾಲ್ವರನ್ನ ರಾಜಾಜಿನಗರ ಠಾಣೆ ಪೊಲೀಸರಿಂದ ಬಂಧನ ಮಾಡಲಾಗಿದೆ. ಮಂಜುನಾಥ, ಶಿವಕುಮಾರ, ಗೋಪಾಲ, ಚಂದ್ರಶೇಖರ ಬಂಧಿತ ಆರೋಪಿಗಳು. ರಿಯಲ್ ಎಸ್ಟೇಟ್​ ಹೆಸರಿನಲ್ಲಿ ವಂಚಿಸಿದಕ್ಕೆ ನಿರ್ಮಾಪಕನ ಬಂಧನ ಮಾಡಲಾಗಿದೆ. ಸಿನಿಮಾಗೆ ಕೋಟ್ಯಂತರ ರೂ. ಬಂಡವಾಳ ಹೂಡಿದ್ದ ಮಂಜುನಾಥ, ಸಿನಿಮಾ ನಿರೀಕ್ಷಿತ ಪ್ರದರ್ಶನ ಕಾಣದೆ ನಷ್ಟವಾಗಿತ್ತು. ರಾಜಾಜಿನಗರದಲ್ಲಿ ಈಗಲ್ ಟ್ರೀ ಬಿಲ್ಡರ್ಸ್ ಆಯಂಡ್​ ಡೆವಲಪರ್ಸ್​ ಡಾಟ್​ ಹೆಸರಿನಲ್ಲಿ ಮಂಜುನಾಥ ರಿಯಲ್ ಎಸ್ಟೇಟ್​ ಕಚೇರಿ ತೆರೆದಿದ್ದ. ಜಾಹೀರಾತು ನೀಡಿದ್ದ ಮಂಜುನಾಥನನ್ನು ಪುಷ್ಪಕುಮಾರ್​ ಎನ್ನುವವರು ಸಂಪರ್ಕಿಸಿದ್ದಾರೆ. ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ಮಂಜುನಾಥ 2 ಲಕ್ಷ ಪಡೆದಿದ್ದ. ಯಾರದ್ದೋ ಸೈಟ್ ತೋರಿಸಿ ಕೊಡಿಸುವುದಾಗಿ ನಂಬಿಸಿದ್ದ. ದಾಖಲೆ ಕೇಳಿದಾಗ ಮಂಜುನಾಥನ ವಂಚನೆ ಜಾಲ ಬಯಲಾಗಿತ್ತು. ರಾಜಾಜಿನಗರ ಪೊಲೀಸ್​ ಠಾಣೆಗೆ ಪುಷ್ಪಕುಮಾರ್ ದೂರು ನೀಡಿದ್ದು, ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸ್ ಸಿಬ್ಬಂದಿ, ನಿರ್ಮಾಪಕ ಮಂಜುನಾಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...