ಇಂದು 2021- 22ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರನ್ನು ಹಿಂದಿಕ್ಕಿದ ಬಾಲಕರು ಮೇಲುಗೈ ಸಾಧಿಸಿದ್ದಾರೆ. ಮಲ್ಲೇಶ್ವರಂ ಬಳಿ ಇರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಇಂಜಿನಿಯರಿಂಗ್ನಲ್ಲಿ ಯಲಹಂಕದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿಯಾದ ಅಪೂರ್ವ ಮೊದಲ ಸ್ಥಾನ ಪಡೆದಿದ್ದಾರೆ. ಮಾರತಹಳ್ಳಿಯ ಶ್ರೀಚೈತನ್ಯ ಟೆಕ್ನೋ ಸ್ಕೂಲ್ನ ಸಿದ್ಧಾರ್ಥ್ ಸಿಂಗ್ ದ್ವಿತೀಯರಾಗಿದ್ದಾರೆ. ಇನ್ನೂ ಕೆಇಎ ವೆಬ್ಸೈಟ್ ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದಾಗಿದೆ.