ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಆಯೋಜಿಸಿದ್ದ ‘ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಸ್ಥಳೀಯ ಭಾಷೆ ಕನ್ನಡವೇ ಮಾಯವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಂಡಿದ್ದರು. ಇಡೀ ಕಾರ್ಯಕ್ರಮವೇ ಹಿಂದಿಮಯವಾಗಿದ್ದು, ಅಲ್ಲಿ ಕನ್ನಡ ಸಂಪೂರ್ಣವಾಗಿ ಕಡೆಗಣಿಸಲ್ಪಿಟ್ಟಿದೆ. ಇದರಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಸೇರಿದಂತೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಇರುವುದು ಕರ್ನಾಟಕದಲ್ಲಿ ಹೊರತು ದೆಹಲಿಯಲ್ಲಿ ಅಲ್ಲ ಎಂದು ಲೇವಡಿ ಮಾಡಿದ್ದಾರೆ. ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ವೇದಿಕೆ ಮೇಲಿನ ಬೋರ್ಡ್ನಲ್ಲಿ ಒಂದೇ ಒಂದು ಕನ್ನಡ ಅಕ್ಷರ ಹಾಕಿಲ್ಲ. ಎಲ್ಲೆಡೆ ಹಿಂದಿ ರಾರಾಜಿಸುತ್ತಿರುವ ಪೋಟೋಗಳನ್ನು ಮುಖ್ಯಮಂತ್ರಿ ಟ್ವಿಟ್ ನಲ್ಲಿ ಹಂಚಿಕೊಂಡಿದ್ದಾರೆ. ಆ ಪೋಸ್ಟ್ ಅನ್ನು ಶೇರ್ ಮಾಡುವ ಮೂಲಕ ಕನ್ನಡಿಗರು ಹಿಂದಿ ಹೇರಿಕೆ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ.
Latest article
ಹೆಚ್.ಡಿ ರೇವಣ್ಣ ಬಂಧನ: ನ್ಯಾಯಾಲಯ ಉಂಟು, ಕಾನೂನು ಉಂಟು ಎಂದ ಡಿ.ಕೆ.ಶಿವಕುಮಾರ್
ಗದಗ: ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಬಂಧನ ವಿಚಾರವಾಗಿ ಗದಗ ನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯ ಉಂಟು, ಕಾನೂನು ಉಂಟು. ನಾವು ಯಾವುದಕ್ಕೂ ಭಾಗಿಯಾಗಲ್ಲ, ನಮಗೆ...
ರೇವಣ್ಣ ಬಂಧನ ಬೆನ್ನಲ್ಲೇ ಭವಾನಿ ರೇವಣ್ಣಗೂ ಸಂಕಷ್ಟ..!
ಬೆಂಗಳೂರು: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಹೆಚ್ಡಿ ರೇವಣ್ಣ ಬಂಧನಕ್ಕೆ ಒಳಗಾಗಿದ್ದಾರೆ. ಭವಾನಿ ರೇವಣ್ಣ ಕರೆಯುತ್ತಿದ್ದಾರೆ ಎಂದು ಹೇಳಿ ತನ್ನ ತಾಯಿಯನ್ನು ಸತೀಶ್ ಬಾಬು ಕರೆದೊಯ್ದಿದ್ದಾನೆ ಎಂದು ಆಕೆಯ ಪುತ್ರ ದೂರು ನೀಡಿದ್ದ. ಈ...
ನನಗೂ ಮತ್ತು ಹಾಸನ ಸಂಸದರಿಗೂ ಹೆಚ್ಚಿನ ಸಂಪರ್ಕ ಇಲ್ಲ !
ಬೆಂಗಳೂರು: ನನಗೂ ಮತ್ತು ಹಾಸನ ಸಂಸದರಿಗೂ ಹೆಚ್ಚಿನ ಸಂಪರ್ಕ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ದೇವೇಗೌಡರ ಭೇಟಿ ಬಳಿಕ ಮಾತನಾಡಿದ ಅವರು, ರೇವಣ್ಣ ವಿಚಾರ ಆಗಲಿ,...