ರಾಜಧಾನಿ ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಧರ್ಮ ದಂಗಲ್ ಬಿಸಿ ತಟ್ಟಿದೆ. ಹಿಂದೂ ವರ್ತಕರಿಂದಲೇ ವಸ್ತು ಖರೀದಿಸುವಂತೆ ವಿಶ್ವ ಹಿಂದೂ ಪರಿಷತ್ ಪೋಸ್ಟರ್ ಅಂಟಿಸುತ್ತಿದ್ದಾರೆ. ವಿಹೆಚ್ಪಿ ಪೋಸ್ಟರ್ಗೆ ವಿಶ್ವ ಸನಾತನ ಪರಿಷತ್ ಬೆಂಬಲ ನೀಡುತ್ತಿದೆ. ಗಣೇಶ ಚತುರ್ಥಿಗೆ ಬಟ್ಟೆ, ಹೂವು, ಹಣ್ಣು, ತರಕಾರಿಯನ್ನು ಹಿಂದೂಗಳ ಅಂಗಡಿಗಳಲ್ಲೇ ಖರೀದಿ ಮಾಡಿ ಎಂದು ಪೋಸ್ಟರ್ ಅಂಟಿಸುತ್ತಿದ್ದಾರೆ.ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ. ಈ ಕುರಿತು ಮಾತನಾಡಿದ ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಭಾಸ್ಕರನ್ ಹಬ್ಬಕ್ಕೆ ಏನೇ ಖರೀದಿಸಬೇಕೆಂದರೂ ಹಿಂದೂ ಅಂಗಡಿಗೆ ಹೋಗಿ ಎಂದು ಮನವಿ ಮಾಡಿದ್ದಾರೆ. ಇನ್ನೂ ಈ ವಿಚಾರವಾಗಿ ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲೀದ್ ಕಿಡಿ ಕಾರಿದ್ದು, ಹಿಂದೂ ಸಂಘಟನೆಗಳ ಯಾವ ಅಭಿಯಾನ ಸಕ್ಸಸ್ ಆಗಿದೆ? ಎಂದು ಪ್ರಶ್ನೆ ಮಾಡಿದ್ದಾರೆ. ಚಾಲಕರ ನಿಷೇಧ, ಹಲಾಲ್, ಮಾವಿನ ಹಣ್ಣು ಖರೀದಿ, ಕುರಿ ವ್ಯಾಪಾರ ಬಹಿಷ್ಕಾರ ಸೇರಿದಂತೆ ಹಿಂದೂ ಸಂಘಟನೆಗಳು ಹಲವು ಬ್ಯಾನ್ ಅಭಿಯಾನ ಮಾಡಿದ್ದವು. ಯಾವುದಾದರೂ ಒಂದಾದರೂ ಯಶಸ್ವಿಯಾಗಿದೆಯಾ? ಎಂದು ಪ್ರಶ್ನಿಸಿದ್ದಾರೆ. ಭಾರತದಲ್ಲಿ ಇರುವ ಶೇ.90 ರಷ್ಟು ಹಿಂದೂಗಳು ವಿಶಾಲ ಹೃದಯದವರು. ಬಾಕಿ ಶೇ 10 ರಷ್ಟು ಮತೀಯವಾದಿಗಳಿದ್ದಾರೆ, ಅದು ಎಲ್ಲ ಧರ್ಮಗಳಲ್ಲೂ ಇರ್ತಾರೆ. ಇದು ತಮ್ಮ ಚಲಾವಣೆಗೋಸ್ಕರ ಮಾಡುತ್ತಿರೋ ಅಭಿಯಾನ. ಒಂದು ವರ್ಷದಿಂದ ಎಷ್ಟು ಅಭಿಯಾನ ಮಾಡಿದರು? ಇವರ ಅಭಿಯಾನದಿಂದ ಏನೂ ಮಾಡೋಕೆ ಆಗೊಲ್ಲ ಎಂದು ಹೇಳಿದರು.
Latest article
ಬೆಂಗಳೂರಲ್ಲಿ ಟೆಕ್ಕಿ ಹೆಂಡತಿಯ ಅನುಮಾನಾಸ್ಪದ ಸಾವು..!
ಬೆಂಗಳೂರು: ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ರಾಜಧಾನಿಯ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಜರುಗಿದೆ.ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ....
ಪ್ರಜ್ವಲ್ ಕೃತ್ಯಗಳ ಬಗ್ಗೆ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿದ್ದರೂ ಟಿಕೆಟ್ ನೀಡಿದ್ದಾರೆ !
ಬೆಂಗಳೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಜಿ ಪರಮೇಶ್ವರ್ ರಾಜೀನಾಮೆ ಕೊಡಬೇಕೆಂದು ಅವರು ಹೇಳುತ್ತಿದ್ದಾರೆ, ಅಸಲಿಗೆ ರಾಜೀನಾಮೆ ಕೊಡಬೇಕಿರುವುದು ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ ಮತ್ತು ಸೂರಜ್ ರೇವಣ್ಣ; ನಮ್ಮ ಮನೆ ಮಗನಿಂದ...
ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ !
ಬೆಂಗಳೂರು: ರೈತರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ'' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮೂಲಕ...