ಸಿಲಿಕಾನ್‌ ಸಿಟಿ ಈಗ ಪ್ರವಾಹ ಸಿಟಿ

Date:

ಸಿಲಿಕಾನ್‌ ಸಿಟಿ, ಗಾರ್ಡನ್‌ ಸಿಟಿ ಹೀಗೆಲ್ಲಾ ಕರೆಯಲ್ಪಡುತ್ತಿರುವ ಬೆಂಗಳೂರು ಇದೀಗ ಪ್ರವಾಹ ಸಿಟಿಯಾಗಿ ಮಾರ್ಪಟ್ಟಿದೆ. ಬೆಂಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೂ ಇತ್ತೀಚಿನ ದಿನಗಳಲ್ಲಿ ಪ್ರವಾಹ ಸೃಷ್ಟಿಯಾಗುತ್ತಿದೆ. ಇನ್ನೂ ನಗರದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಯಿಂದ ನಗರದ ಪ್ರಮುಖ ಶಾಪಿಂಗ್ ರಸ್ತೆಗಳಾದ ಅವೆನ್ಯೂ ರಸ್ತೆ, ಬಿವಿಕೆ ಅಯ್ಯಂಗಾರ್ ರಸ್ತೆ, ಕೆಜಿ ರಸ್ತೆ, ಶಿವಾಜಿನಗರದ ರಸ್ತೆಗಳು ಪ್ರವಾಹದ ಪರಿಸ್ಥಿತಿಯಲ್ಲಿದೆ.

 

ಇನ್ನೂ ನಗರದಲ್ಲಿ ಸುರಿದ ಜೋರು ಮಳೆಗೆ ರಸ್ತೆಗಳು ಗುಂಡಿಗಳಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನರಕಯಾತನೆ ಪಡುವಂತಾಗಿದೆ. ಅದರಂತೆ ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಬಳಿಯ ಸುಲ್ತಾನಪೇಟೆಯಲ್ಲೂ ಮಳೆಯ ಅವಾಂತರದಿಂದ ಗಣೇಶ ಎಂಬಾತ ತೆರೆದ ಮ್ಯಾನ್ ಹೋಲ್ ಗೆ ಬಿದ್ದು ಜೀವಕಳೆದುಕೊಂಡಿದ್ದರು. ಈ ಹಿನ್ನೆಲೆ ಬಿಬಿಎಂಪಿ ಅವ್ಯವಸ್ಥೆ ವಿರುದ್ಧ ತಿರುಗಿಬಿದ್ದ ವರ್ತಕರು ಇಂದು ಪ್ರತಿಭಟನೆ ನಡೆಸಿದ್ದು,
ರಸ್ತೆ, ಚರಂಡಿ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಮಳೆಬಂದಾಗ ರಸ್ತೆಗಳು
ಕೆರೆಯಂತಾಗುತ್ತದೆ. ಭಾರಿ ಮಳೆ ಹಾಗೂ ಕಳಪೆ ಮೂಲಸೌಕರ್ಯಗಳಿಂದಾಗಿ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ ಎಂದು ಚಿಕ್ಕಪೇಟೆ ವರ್ತಕರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...