No menu items!
18.3 C
Munich
Thursday, April 23, 2026

ರಾಜಕಾಲುವೆ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

Must read

ರಾಜಕಾಲುವೆ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಬೆಂಗಳೂರಿನ ತಹಶೀಲ್ದಾರ್ ಕೋರ್ಟ್ ಆದೇಶ ನೀಡಿದೆ. ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಬಾಗ್ಮನೆ ಟೆಕ್ ಪಾರ್ಕ್, ಪೂರ್ವ ಪಾರ್ಕ್ ರಿಡ್ಜ್ ಸೇರಿದಂತೆ ಹಲವರು ಒತ್ತುವರಿ ತೆರವಿಗೆ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅರ್ಜಿ ವಿಚಾರಣೆ ನಡೆಸಿರುವ ಬೆಂಗಳೂರು ತಹಶೀಲ್ದಾರ್ ಕೋರ್ಟ್, ಒತ್ತುವರಿ ತೆರವಿಗೆ ಆದೇಶ ನೀಡಿದೆ. ಸರ್ವೆ ನಂ 35/1, 35/2, 35/3, 38/2 ಹಾಗೂ 85ರಲ್ಲಿ ತೆರವು ಮಾಡುವಂತೆ ಆದೇಶಿಸಿದೆ. ಕಟ್ಟಡದ ಮಾಲೀಕರೇ ಸ್ವಂತ ಖರ್ಚಿನಲ್ಲಿ ಒತ್ತುವರಿ ತೆರವು ಮಾಡಬೇಕು. ಇಲ್ಲವಾದಲ್ಲಿ ಪಾಲಿಕೆಯ ಸರ್ವೇಯರ್ ನೆರವು ಪಡೆಯಬಹುದು. ಅದಕ್ಕೆ ತಗುಲುವ ವೆಚ್ಚವನ್ನು ಒತ್ತುವರಿದಾರರೇ ಭರಿಸಬೇಕು ಎಂದು ಸೂಚಿಸಿದೆ. ಅಲ್ಲದೇ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆಯೂ ಆದೇಶ ಹೊರಡಿಸಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article