ಸೈಬರ್ ವಂಚಕರ ತಂಡ 5G ವಂಚನೆಗೆ ಸಿದ್ಧತೆ ನಡೆಸಿದ್ದು, ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಹಾಗೂ ಸಿಸಿಬಿ ಹೊಸ ವಂಚನೆ ತಡೆಯಲು ಜಾಗೃತಿ ಮೂಡಿಸುತ್ತಿದೆ.ಕಾಲ್ ಸೆಂಟರ್ಗಳಿಂದ ಕರೆ ಮಾಡುವ ಮೂಲಕ ಹೊಸ ವಂಚನೆಗೆ ಸಿದ್ಧವಾಗುತ್ತಿರುವ ವಂಚಕರ ಗ್ಯಾಂಗ್ ಏರ್ಟೆಲ್, ಜಿಯೋ ಸೇರಿದಂತೆ ಹಲವು ನೆಟ್ವರ್ಕ್ಗಳಿಂದ ನಿಮ್ಮ ಸಿಮ್ ಅಪ್ಡೇಟ್ ಮಾಡುತ್ತೇವೆ ಎಂದು ಕರೆ ಮಾಡುತ್ತಾರೆ. ಕರೆ ಮಾಡಿ ನಿಮ್ಮ ನಂಬರ್ ಮತ್ತು ಮಾಹಿತಿ ಕೊಡಿ ಎಂದು ಹೇಳುವ ಈ ಗ್ಯಾಂಗ್ ಒಟಿಪಿ ಬರುತ್ತೆ ಅದನ್ನೆ ಹೇಳಿ ಅಂತಾರೆ. ಒಂದು ವೇಳೆ ಒಟಿಪಿ ಹೇಳಿದರೆ ಮುಗೀತು ಕ್ಷಣಾರ್ಧದಲ್ಲಿ ನಿಮ್ಮ ಖಾತೆಯಲ್ಲಿರುವ ಹಣವನ್ನು ದೋಚುತ್ತಾರೆ. ಈ ಕಾರಣದಿಂದ ಸಿಸಿಬಿ ಮತ್ತು ಸೆನ್ ಪೊಲೀಸರು ಜಾಗೃತಿ ಮೂಡಿಸುತ್ತಿದ್ದು, ಯಾವುದೇ ಅಪ್ಡೇಟ್ ಇದ್ದರೂ ಅದನ್ನು ಸಂಬಂಧಪಟ್ಟ ನೆಟ್ವರ್ಕ್ ಕಚೇರಿಗಳಲ್ಲಿ ಮಾಡಿಸಿ, ಸುಖಾಸುಮ್ಮನೆ ಒಟಿಪಿ ಹೇಳಿ ಪೇಚಿಗೆ ಸಿಲುಕದಂತೆ ಮನವಿ ಮಾಡಿದ್ದಾರೆ. ಒಂದು ವೇಳೆ ಅಂತಹ ಕರೆ ಬಂದರೆ ಅಥವಾ ವಂಚನೆಯಾದರೆ ತಕ್ಷಣ 122ಗೆ ಕರೆ ಮಾಡುವಂತೆ ನಗರ ಅಪರಾಧ ವಿಭಾಗದ ಡಿಸಿಪಿ ಡಾ.ಶರಣಪ್ಪ ಮನವಿ ಮಾಡಿದ್ದಾರೆ.
Latest article
ಕೇಂದ್ರ ಸರ್ಕಾರ ನೀಡಿದ ಹಣವನ್ನು ರೈತರಿಗೆ ಸರಿಯಾಗಿ ತಲುಪಿಸಿಲ್ಲ: ಆರ್.ಅಶೋಕ್
ಬೆಂಗಳೂರು: ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡ ರೈತರಿಗೆ ಸರಿಯಾಗಿ ತಲುಪಿಸಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...
ಬೆಂಗಳೂರು ನಗರಾದ್ಯಂತ ಬೆಳ್ಳಂಬೆಳಗ್ಗೆ ಭಾರೀ ಮಳೆ..!
ಬೆಂಗಳೂರು: ಬೆಂಗಳೂರಿನ ಹಲವೆಡೆ ಬೆಳ್ಳಂ ಬೆಳಗ್ಗೆ ಭಾರೀ ಮಳೆಯಾಗಿದೆ. ರಾಮಕೃಷ್ಣ ಆಶ್ರಮ, ಜೆಸಿ ರಸ್ತೆ, ನ್ಯಾಷನಲ್ ಕಾಲೇಜು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದು ವಾಹನ ಸವಾರರ ಸಂಚಾರಕ್ಕೆ ತೊಡಕು ಉಂಟಾಯಿತು. ನ್ಯಾಷನಲ್ ಕಾಲೇಜು...
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಕೊಲೆ ಕೇಸ್: ಕೊನೆಗೂ ಆರೋಪಿ ಅರೆಸ್ಟ್
ಹುಬ್ಬಳ್ಳಿ: ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ವಿಶ್ವ ಮೇ 15ರ ಮುಂಜಾನೆ 5.30ಕ್ಕೆ ಮನೆಗೆ ನುಗ್ಗಿ ಅಂಜಲಿಗೆ ಚಾಕುವಿನಿಂದ ಇರಿದು...