ಜೆಡಿಎಸ್ ಅಭ್ಯರ್ಥಿಗಳ ಲಿಸ್ಟ್ ನಲ್ಲಿ ಯಾರ್ ಯಾರಿದ್ದಾರೆ ?

Date:

ನಾಡದೇವಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ಭಾಗದ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನ ಜಿ.ಟಿ.ದೇವೇಗೌಡ ಘೋಷಿಸಿದ್ದಾರೆ. ಚಾಮುಂಡೇಶ್ವರಿಗೆ ಜಿ.ಟಿ.ದೇವೇಗೌಡ, ಹುಣಸೂರಿಗೆ ಪುತ್ರ ಹರೀಶ್ ಗೌಡ, ಕೆ.ಆರ್.ನಗರಕ್ಕೆ ಸಾ.ರಾ.ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ಟಿ.ನರಸೀಪುರಕ್ಕೆ ಅಶ್ವಿನ್ ಕುಮಾರ್, H.D.ಕೋಟೆಗೆ ಜಯಪ್ರಕಾಶ್ಗೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅಭ್ಯರ್ಥಿಗಳನ್ನ ಜಿಟಿದೇವೇಗೌಡ್ರು ಘೋಷಿಸಿದ್ರು. ನಾನು ನಿನ್ನೆಯಿಂದಲೇ ಜೆಡಿಎಸ್ ಸಂಘಟನೆಯಲ್ಲಿ ತೊಡಗಿದ್ದೇನೆ. ನನ್ನ ಮನಸ್ಸು ಮೂರು ವರ್ಷಗಳ ನಂತರ ಸಮಾಧಾನದಲ್ಲಿದೆ. ನಾನು, ನನ್ನ‌ ಕುಟುಂಬ ಖುಷಿಯಲ್ಲಿದೆ, ಯಾವ ಗೊಂದಲಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ರು.. ಚಾಮುಂಡಿ ತಾಯಿಗೆ ಹೆಚ್‌ ಡಿ ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೊಂದು ತಿಂಗಳಿನಲ್ಲಿ ನಾನು ವಾಕ್ ಮಾಡುವ ಶಕ್ತಿಕೊಡು ಎಂದು ತಾಯಿ ಮುಂದೆ ಬೇಡಿ ಕೊಂಡಿದ್ದಾರೆ. ಜನವರಿ ತಿಂಗಳಿನಲ್ಲಿ ಹೆಚ್‌ ಡಿ ದೇವೇಗೌಡರು ಚಂಡಿಕಾ ಹೋಮ ನಡೆಸಲಿದ್ದಾರೆ. ಹೆಚ್ ಡಿ ದೇವೇಗೌಡರ ಉತ್ಸಾಹ ಕಂಡು ನಾವೇ ಅಚ್ಚರಿಗೆ ಒಳಗಾಗಿದ್ದೇವೆ. ಅವರೇ ನಮಗೆ ಪ್ರೇರಣೆಯಾಗಿದ್ದಾರೆ. ಅವರನ್ನು ಸಂತೋಷವಾಗಿಡುವುದೇ ನಮ್ಮ ಸಂತೋಷ ಎಂದು ತಿಳಿಸಿದ್ರು..

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...