ಹಾಸನಾಂಬೆ ಮುಂದೆ ಶಾಸಕರ ಹೈಡ್ರಾಮಾ : ಪ್ರೀತಂಗೌಡ ವಿರುದ್ದ ಆಕ್ರೋಶ

Date:

ಹಾಸನಾಂಭೆ ದೇವಸ್ಥಾನದ ಮುಂದೆ ನಿನ್ನೆ ಸಖತ್ ಹೈಡ್ರಾಮಾ ನಡೆದಿದೆ . ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ಮೈಸೂರಿನ ಚಾಮರಾಜ ಕ್ಷೇತ್ರದ ಸ್ವಪಕ್ಷೀಯ ಶಾಸಕ ನಾಗೇಂದ್ರ ಕೆಂಡಾಮಂಡಲರಾದ ಘಟನೆ ನಡೆದಿದೆ , ” ನಿಮ್ಮ ಶಾಸಕನ ದವಲತ್ತು ಹೆಚ್ಚು ದಿನ ನಡೆಯಲ್ಲ ರೀ, ನನಗೂ ಗೊತ್ತಿದೆ.. ” ಎಂದು ಕಿಡಿಕಾರಿದ್ದು , ಹಾಸನಾಂಬೆ ದೇವಾಲಯದಿಂದ ತೆರಳಿದ ಘಟನೆ ಭಾನುವಾರ ನಡೆದಿದೆ.

ಹಾಸನಾಂಬೆಯ ದರ್ಶನದ 11ನೇ ದಿನ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಸುಮಾರು ಒಂದರಿಂದ ಎರಡು ಲಕ್ಷ ಮಂದಿ ದರ್ಶನ ಪಡೆದಿದ್ದಾರೆ. ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ ತಮ್ಮ ಕುಟುಂಬ ಸಮೇತ ದರ್ಶನಕ್ಕೆ ಬಂದ ವೇಳೆ ಒಂದು ಗಂಟೆಗೂ ಹೆಚ್ಚು ಕಾಲ ದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆ ಆಕ್ರೋಶಗೊಂಡ ಅವರು ಸ್ಥಳೀಯ ಶಾಸಕ ಪ್ರೀತಂ ಗೌಡಗೆ ಮೊಬೈಲ್ ಕರೆ ಮಾಡಿದ್ದಾರೆ. ಒಂದಲ್ಲ.. ಎರಡಲ್ಲ ಅನೇಕ ಬಾರಿ ದೂರವಾಣಿ ಕರೆ ಮಾಡಿದರೂ ಕರೆ ಸ್ವೀಕರಿಸಿದ ಹಿನ್ನೆಲೆ ನಾಗೇಂದ್ರ ಆಕ್ರೋಶಗೊಂಡಿದ್ದಾರೆ. ಕುಟುಂಬ ಸಮೇತ ಬಂದ ತಮಗೆ ಅಪಮಾನ ಮಾಡಿದ ಶಾಸಕರ ಮೇಲೆ ಕೆಂಡಾಮಂಡಲವಾಗಿ, ಕೂಗಾಡಿ ವಾಪಸ್ ಮೈಸೂರಿಗೆ ತೆರಳಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...