ಒಕ್ಕಲಿಗ ಸಮುದಾಯದ ಮೀಸಲಾತಿ ಹೋರಾಟಕ್ಕೆ ಶ್ರೀಗಳ ಬೆಂಬಲ

Date:

ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳ ಬಗ್ಗೆ ಹೋರಾಟ ನಡೆಯುತ್ತಿದ್ದು, ನಿರ್ಮಲಾನಂದನಾಥ ಶ್ರೀಗಳು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ನಾವು ಕೂಡ ಈ ಹೋರಾಟದ ಪರ ಇದ್ದೇವೆ ಎಂದು ಬಿಜೆಪಿ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ರು. ಈ ಬಗ್ಗೆ ಮಂಡ್ಯದಲ್ಲಿ ಮಾತ್ನಾಡಿದ ಅವರು, ನಾವೆಲ್ಲಾ ಶ್ರೀಗಳ ಪರ ಇದ್ದೇವೆ. ನಮ್ಮ ಸಂಪೂರ್ಣ ಬೆಂಬಲ ಅವರಿಗಿದೆ. ST ಮೀಸಲಾತಿಗೆ ಎಷ್ಟೋ ವರ್ಷದಿಂದ ಹೋರಾಟ ನಡೆಯುತ್ತಿತ್ತು. ಆದ್ರೆ, ಇದನ್ನು ನಾವು ಮಾಡಿದ್ದು ಅಂತ ಬೇರೆ ಪಕ್ಷದವರು ಮೂಗು ವರೆಕೊಳ್ತಿದ್ದಾರೆ. ನಮ್ಮ ಸರ್ಕಾರ, ಸಿಎಂ, ಪ್ರಧಾನಿ, ಬಿಜೆಪಿಯಿಂದ ಮೀಸಲಾತಿ ಹೆಚ್ಚಳವಾಗಿದೆ. ನಿನ್ನೆ ಸಿದ್ದರಾಮಯ್ಯ ಮಂಡ್ಯಕ್ಕೆ ಬಂದು ಮೂಗಿನ ನೇರಕ್ಕೆ ಹೇಳಿದ್ದಾರೆ. ಅದೇ ಅವರು 5 ವರ್ಷ ಸಿಎಂ ಆಗಿದ್ದಾಗ ಯಾಕೆ ಮೀಸಲಾತಿ ಹೆಚ್ಚಳ ಮಾಡಿಲ್ಲ ಎಂದು ಪ್ರಶ್ನಿಸಿದ್ರು. ಇನ್ನ ಒಕ್ಕಲಿಗ ಸಮುದಾಯದ ಪರ ನಾವಿದ್ದು, ಸಿಎಂ ಬೊಮ್ಮಾಯಿ ಜೊತೆ ಕ್ಯಾಬಿನೆಟ್ನಲ್ಲಿ ಚರ್ಚೆಯಾಗಿದೆ. ಒಕ್ಕಲಿಗರ ಸಮುದಾಯಕ್ಕೆ ಅನ್ಯಾಯ ಆಗಲು ಬಿಡಲ್ಲ. ಕೇಂದ್ರ ಸರ್ಕಾರದ ಗಮನ ಸೆಳೆದು ಇದನ್ನ ಕಾರ್ಯಗತಗೊಳಿಸುತ್ತೇವೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ರು.

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...