ಮುನಿಸು ಬದಿಗಿಟ್ಟು ಸುಭದ್ರ ಸರಕಾರ ನೀಡೋಣ: ಸಚಿವರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ

Date:

ಬೆಂಗಳೂರು;- ಮುನಿಸು ಬದಿಗಿಟ್ಟು ಸುಭದ್ರ ಸರಕಾರ ನೀಡೋಣ ಎಂದು ಸಚಿವರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಸದ್ಯವೇ ಲೋಕಸಭಾ ಚುನಾವಣೆ ಇರುವ ಕಾರಣ ನಾವು ಭಿನ್ನಮತ ಪ್ರದರ್ಶಿಸುವುದು ಸರಿಯಲ್ಲ. ಹೀಗಾಗಿ ಎಲ್ಲ ಮುನಿಸುಗಳನ್ನು ಬದಿಗಿಟ್ಟು, ಸುಭದ್ರ ಸರಕಾರ ನೀಡೋಣ ಹಾಗೂ ಲೋಕಸಭಾ ಚುನಾವಣೆಯತ್ತ ದೃಷ್ಟಿ ಹರಿಸೋಣ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟದ ಸಚಿವರಿಗೆ ಮನವಿ ಮಾಡಿದ್ದಾರೆ.
ಅನಗತ್ಯ ಹೇಳಿಕೆ ನೀಡಿ ವಿವಾದ ಸೃಷ್ಟಿಸದಂತೆ ಎಲ್ಲರನ್ನೂ ಕೋರಿಕೊಂಡಿದ್ದಾರೆ. ಉಪಾಹಾರ ಕೂಟದಲ್ಲಿ ಡಿಸಿಎಂ ಶಿವಕುಮಾರ್, ಡಾ| ಜಿ. ಪರಮೇಶ್ವರ, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ಕೆ.ಎನ್. ರಾಜಣ್ಣ ಸೇರಿ 15 ಸಚಿವರು ಭಾಗವಹಿಸಿದ್ದರು. ಉಳಿದ ಸಚಿವರಿಗೆ ಮುಂದಿನ ದಿನಗಳಲ್ಲಿ ಉಪಾಹಾರ ಕೂಟ ಏರ್ಪಡಿಸಲು ಸಿಎಂ ನಿರ್ಧರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.!

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.! ಹೊಸಕೋಟೆ:...

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...