ಡಿಕೆ ಶಿವಕುಮಾರ್ʼಗೆ ನಾಳೆಯೇ ಸಿಎಂ ಆಗಬೇಕೆಂಬ ತವಕವಿದೆ: ವಿಶ್ವೇಶ್ವರ ಹೆಗಡೆ ಕಾಗೇರಿ

Date:

ಚಿತ್ರದುರ್ಗ: ಡಿಸಿಎಂ ಡಿಕೆ ಶಿವಕುಮಾರ್ʼಗೆ ನಾಳೆಯೇ ಸಿಎಂ ಆಗಬೇಕೆಂಬ ತವಕವಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಚಿತ್ರದುರ್ಗದ ಕೊಳಾಳ್ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಅಧಿಕಾರದಲ್ಲಿ 2 ದಿನ ಇರ್ತೀನೋ ಬಿಡ್ತೀನೋ ಎಂಬ ಭಾವವಿದೆ. ಅಲ್ಲದೇ ಕಾಂಗ್ರೆಸ್ನಲ್ಲಿ ಸಿಎಂ, ಡಿಸಿಎಂ ಯಾರಾಗಬೇಕೆಂಬ ಸ್ಪರ್ಧೆ ನಡೆಯುತ್ತಿದ್ದು, ಅಧಿಕಾರದ ದಾಹ ಹೆಚ್ಚಾಗಿದೆ.
ಅಧಿಕಾರ ಹಂಚಿಕೆ ವಿಚಾರದಲ್ಲಿ ಸ್ಪರ್ಧೆ ಏರ್ಪಟ್ಟಿದ್ದು, ಈ ಸರ್ಕಾರಕ್ಕೆ ಜನರ ಹಿತ ಕಾಪಾಡುವಲ್ಲಿ ಕಾಳಜಿಯೇ ಕಾಣುತ್ತಿಲ್ಲ ಎಂದು ಆರೋಪಿಸಿದರು. ಕಾವೇರಿ ನೀರು ಈಗಲೂ ತಮಿಳುನಾಡಿಗೆ ಹರಿಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಶಿವಮೊಗ್ಗ, ಕೋಲಾರದಲ್ಲಿ ಖಡ್ಗ ಹಿಡಿದು ಟಿಪ್ಪು ಮೆರವಣಿಗೆ ನಡೆದಿದ್ದು, ಕೋಮು ಭಾವನೆ ಕೆರಳಿಸುವ ಮತ್ತು ದ್ವೇಷ ಭಾವನೆ ಹಬ್ಬಿಸುವ ಕೆಲಸಕ್ಕೆ ಸರ್ಕಾರದ ರಕ್ಷಣೆ ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

Share post:

Subscribe

spot_imgspot_img

Popular

More like this
Related

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...