ಕೋಲಾರದಲ್ಲಿ ಭೀಕರ ಕೊಲೆ ಪ್ರಕರಣ: ತನಿಖೆ ವೇಳೆ ಹಂತಕರ ಹಲವು ವಿಕೃತ ಕೆಲಸಗಳು ಬೆಳಕಿಗೆ

Date:

ಕೋಲಾರ: ಭೀಕರವಾಗಿ ಕೊಲೆಯಾಗಿದ್ದ ಬಾಲಕ ಕಾರ್ತಿಕ್ ಸಿಂಗ್ ಪ್ರಕರಣದ ತನಿಖೆ ಮುಂದುವರೆದಿದೆ. ತನಿಖೆ ವೇಳೆ ಹಂತಕರ ಹಲವು ವಿಕೃತ ಕೆಲಸಗಳು ಬೆಳಕಿಗೆ ಬಂದಿವೆ. ಬಾಲಕ ಕಾರ್ತಿಕ್ ದೇಹಕ್ಕೆ ಬರ್ಬರವಾಗಿ ಇರಿದ ಹಂತಕರು, ಆತ ನೋವಿನಿಂದ ನರಳುತ್ತಾ ಇರುವ ದೃಶ್ಯವನ್ನು ವಿಡಿಯೋ ಮಾಡಿಕೊಂಡಿದ್ದರು. ಅಷ್ಟೇ ಅಲ್ಲ, ಬಾಲಕನ ಮೃತ ದೇಹದ ಮೇಲೆ ‘S’ ಮತ್ತು ‘R’ ಅಕ್ಷರಗಳನ್ನು ಚಾಕುವಿನಿಂದ ಬರೆದು ವಿಕೃತಿ ಮೆರೆದಿದ್ದರು. ಇನ್ನು 6 ಮಂದಿ ಹಂತಕರ ಪೈಕಿ ಮೂವರನ್ನು ಬಂಧಿಸಲಾಗಿದೆ. ಬಾಲಕ ಕಾರ್ತಿಕ್ ಸಿಂಗ್ ಕೊಲೆ ನಂತರವೂ ಹಂತಕರು ಪೈಶಾಚಿಕ ಕೃತ್ಯ ನಡೆಸಿದ್ದಾರೆ. ಕಾರ್ತಿಕ್ ಸಿಂಗ್ ಕೊಲೆಗೈದು ದೇಹದ ಮೇಲೆ S ಹಾಗೂ R ಎಂದು ಬರೆದು ವಿಕೃತಿ ಮೆರೆದಿದ್ದು ತನಿಖೆ ವೇಳೆ ಬಯಲಾಗಿದೆ.
ಕಾರ್ತಿಕ್ ಸಿಂಗ್ ಮುಖ, ಕತ್ತು, ಎದೆ ಭಾಗದ ಮೇಲೆ S ಎಂದು ಹಂತಕರು ಚಾಕುವಿನಲ್ಲೇ ಬರೆದಿದ್ದಾರೆ. ಇನ್ನು ಆತನ ಎದೆಯ ಮೇಲೆ ಒಂದು ಬಾರಿ R ಎಂದು ಬರೆಯಲಾಗಿದೆ. ಕಾರ್ತಿಕ್ ಸಿಂಗ್ ಸಾವನ್ನಪ್ಪಿದ ನಂತರ, ಪದಗಳನ್ನು ಬರೆದಿರುವ ಮಾಹಿತಿ ಸಿಕ್ಕಿದೆ. ಅಂದಹಾಗೆ ಕೊಲೆಯ ಪ್ರಮುಖ ಆರೋಪಿಗಳಾದ ದಿಲೀಪ್ @ ಶೈನು ಹಾಗೂ ರಿಷಿಕ್ ಎನ್ನುವರ ಹೆಸರಿನ ಮೊದಲ ಅಕ್ಷರಗಳನ್ನ ಬರೆದಿರುವ ಶಂಕೆ ಇದೆ.ಕಾರ್ತಿಕ್ ಸಿಂಗ್ ಕೊಲೆ ಮಾಡಿದ ಬಳಿಕ ಅವರವರ ಮನೆಯಲ್ಲಿ ಊಟ ಮಾಡಿ, ಬಳಿಕ 7 ಮಂದಿ ಆರೋಪಿಗಳೂ ಪರಾರಿಯಾಗಿದ್ದರು. ಈ ಕೇಸ್ಗೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಇಬ್ಬರು ಆರೋಪಿಗಳನ್ನ ಬಂಧಿಸಿ, 7 ಮಂದಿಯನ್ನ ವಶಕ್ಕೆ ಪಡೆದು ಕೋಲಾರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...