No menu items!
13.7 C
Munich
Wednesday, May 20, 2026

ಡಿ.ವಿ.ಸದಾನಂದಗೌಡ ನಿವೃತ್ತಿ ವಿಚಾರ: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು..?

Must read

ಬೆಂಗಳೂರು: ಚುನಾವಣಾ ರಾಜಕೀಯದಿಂದ ಡಿ.ವಿ.ಸದಾನಂದಗೌಡ ನಿವೃತ್ತಿ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಂಸದ ಡಿ.ವಿ.ಸದಾನಂದಗೌಡಗೆ ಹೈಕಮಾಂಡ್ ಸೂಚನೆ ಕೊಟ್ಟಿದೆ. ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿ ಇರಲು ಹೈಕಮಾಂಡ್ ಹೇಳಿದೆ. ಚುನಾವಣೆಗೆ ನಿಲ್ಲದಂತೆ ಸದಾನಂದಗೌಡಗೆ ಹೈಕಮಾಂಡ್ ಸೂಚಿಸಿದೆ ಎಂದು ತಿಳಿಸಿದರು. ಪಕ್ಷದ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿಕೆ ಕುರಿತು ಮಾತನಾಡಿ, ಸೋಮಶೇಖರ್ ಬಳಿ ಮಾತಾಡಿದ್ದೇನೆ. ಅವರು ಪಕ್ಷ ಬಿಟ್ಟು ಹೋಗಲ್ಲ. ಅಸಮಾಧಾನ ಇದ್ದರೆ ಮಾತಾಡಿ ಸರಿಪಡಿಸ್ತೇನೆ ಎಂದು ತಿಳಿಸಿದರು.

- Advertisement -spot_img

More articles

- Advertisement -spot_img

Latest article