ಇಬ್ಬರೂ ಒಟ್ಟಾಗಿ ಹೋದರೆ ಕಾಂಗ್ರೆಸ್ ವಿರುದ್ಧ ಹೋರಾಟ ಸುಲಭವಾಗುತ್ತೆ !

Date:

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಒಳ್ಳೆಯ ಬೆಳವಣಿಗೆ ಎಂದು ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಬಿಎಸ್ʼವೈ ಸಿಎಂ ಆಗಬೇಕೆಂದು 50,000 ಜನ ಸೇರಿಸಿದವನು ನಾನು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಮೇಲೆ ವೀರಶೈವ ಮಾತ್ರವಲ್ಲ, ಎಲ್ಲಾ ಸಮುದಾಯದವರನ್ನು ಸೇರಿಸಿಕೊಂಡು ಒಟ್ಟಾಗಿ ಹೋಗಿದ್ದಾರೆ. BSY, HDK ಒಟ್ಟಾಗಿ ಹೋದ ಕಾರಣಕ್ಕಾಗಿಯೇ ಅಧಿಕಾರ ಸಿಕ್ಕಿದ್ದು. ಇಬ್ಬರೂ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು.
ಈಗ ಅದೇ ರೀತಿ BSY ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಲಾಗಿದೆ. ಮತ್ತೊಂದು ಕಡೆ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹೋದರೆ ಕಾಂಗ್ರೆಸ್ ವಿರುದ್ಧ ಹೋರಾಟ ಸುಲಭವಾಗುತ್ತೆ. ಬಿ.ವೈ.ವಿಜಯೇಂದ್ರ ಯುವ ನಾಯಕ, ಸಮುದಾಯದ ಬೆಂಬಲ ಇದೆ. ಯಡಿಯೂರಪ್ಪ ಸಿಎಂ ಆಗಲು ವಿಜಯೇಂದ್ರ ಚಾಣಾಕ್ಷತನವೂ ಇದೆ. BSY ಮೂಲೆ ಗುಂಪು ಅನ್ನೋ ಕಾರಣಕ್ಕೆ ಬಿಜೆಪಿಗೆ ಹಿನ್ನಡೆಯಾಗಿತ್ತು. ಆದ್ದರಿಂದ ಬಿ.ವೈ.ವಿಜಯೇಂದ್ರ ಆಯ್ಕೆ ಸೂಕ್ತವಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...