ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಲಿಂಗೈಕ್ಯ

Date:

ಬೆಳಗಾವಿ : ಗಡಿಯಲ್ಲಿ ಸದ್ದಿಲ್ಲದೆ ಕನ್ನಡದ ಬೆಳೆಸುವ ಮೂಲಕ ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತಿಯಾಗಿದ್ದ ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಭಾನುವಾರ ಲಿಂಗೈಕ್ಯರಾಗಿದ್ದಾರೆ. 12ರಂದು ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ


ಗಡಿ ಭಾಗದಲ್ಲಿ ಚಿಂಚಣಿ ಶ್ರೀಗಳು ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾಗಿದ್ದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿಯಾಗಿದ್ದ ಇವರು ಅಪಾರ ಭಕ್ತರನ್ನು, ಅನುಯಾಯಿಗಳನ್ನು ಹೊಂದಿದ್ದರು. ಕೆಲ ದಿನಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ವಾಮೀಜಿ ಅಗಲಿಕೆಯಿಂದಾಗಿ ಸಾವಿರಾರು ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ.
ಭಾನುವಾರವೇ ಸ್ವಾಮೀಜಿಯವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ. ಇನ್ನೂ ನೂರಾರು ಭಕ್ತರು ಮಠದತ್ತ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...