ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ – ಕಳವಳ ವ್ಯಕ್ತಪಡಿಸಿದ ಸಚಿವ ಹೆಚ್​ಕೆ ಪಾಟೀಲ್

Date:

ಗದಗ:- ಹೆಚ್ ಕೆ ಪಾಟೀಲ್ ನೀರಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಬೇಸಿಗೆಯಲ್ಲಿ ಕುಡಿಯುವ ನೀರಿ ಸಮಸ್ಯೆ ಎದುರಾಗಲಿದೆ ಎಂದು ಗದಗದಲ್ಲಿ ಸಚಿವ ಹೆಚ್​ಕೆ ಪಾಟೀಲ್ ಆತಂಕ ಹೊರ ಹಾಕಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ಮುಂದಿನ ಜೂನ್, ಜುಲೈ ವರೆಗೂ ಮಳೆ ಬರುವ ಲಕ್ಷಣಗಳು ಕಡಿಮೆ ಇದೆ. ವಾಡಿಕೆ ಮಳೆಗಿಂತ ಬಹಳ ಕೊರತೆ ಇದೆ. ಹೀಗಾಗಿ ಕುಡಿಯುವ ಕೊರತೆ ಸಾಧ್ಯತೆ ಇದೆ‌. ಸಾರ್ವಜನಿಕರು ನೀರಿನ ಬಳಕ ವಿಚಾರ ಮಾಡಿ ಬಳಕೆ ಮಾಡಬೇಕಾದ ಮಾನಸಿಕ ಸ್ಥಿತಿಗೆ ಬರಬೇಕಿದೆ. ನೀರು ಇದ್ದರೆ ಹೇಗೆ ಬೇಕಾದರೂ ಬಳಕೆ ಮಾಡುತ್ತೇವೆ. ಆದರೆ ನೀರಿನ ಕೊರತೆ ಆಗುವ ಸಾಧ್ಯತೆ ಇರುವುದರಿಂದ ಎಲ್ಲರೂ ಮುಂಜಾಗ್ರತೆಯಿಂದ ಇರಬೇಕು ಎಂದರು.

ನೀರು ಹಾಳು‌ ಮಾಡದೇ ಮಿತವಾಗಿ ಬಳಸಬೇಕು ಅಂತ ಜಿಲ್ಲೆಯ ಜನರಿಗೆ ಮನವಿ ಮಾಡಿದ ಹೆಚ್​ಕೆ ಪಾಟೀಲ್, ಗದಗ ಜಿಲ್ಲೆಯಲ್ಲಿ ಭೀಕರ ಬರ ಹಿನ್ನೆಲೆ ಮೇವು, ನೀರಿನ ಕೊರತೆ ಆಗದಂತೆ ಎಚ್ಚರಿಕೆ ವಹಿಸುವಂತ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ‌ ಮೇವು ಬ್ಯಾಂಕ್ ತೆರೆಯಲು ಸೂಚಿಸಿದರು.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...