ನನ್ನ ಪಕ್ಷಾಂತರ ಪ್ರಭಾವ ಪಂಚರಾಜ್ಯ ಚುನಾವಣೆ ಮೇಲೂ ಬೀರಿದೆ !

Date:

ಬೆಂಗಳೂರು: ನನ್ನ ಪಕ್ಷಾಂತರ ಪ್ರಭಾವ ಪಂಚರಾಜ್ಯ ಚುನಾವಣೆ ಮೇಲೂ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು. ಈ ಸಂಬಂಧ ಮಾತನಾಡಿದ ಅವರು,ನನ್ನ ಪಕ್ಷಾಂತರದ ಪ್ರಭಾವ ಈಗ ಪಂಚರಾಜ್ಯಗಳ ಚುನಾವಣೆಯ ಮೇಲೂ ಆಗಿದೆ. ಹಾಗಾಗಿಯೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಬಿಜೆಪಿ ಟಿಕೆಟ್ ನೀಡಿದೆ ಎಂದರು
ಕರ್ನಾಟಕದಲ್ಲಿ ಹಿರಿಯರ ನಿರ್ಲಕ್ಷಿಸಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಹೀಗಾಗಿ ಪಂಚರಾಜ್ಯಗಳ ಚುನಾವಣೆಯಲ್ಲಿ ಈಗ ಹಿರಿಯರಿಗೆ ಮಣೆ ಹಾಕಲಾಗಿದೆ. ಎಲ್ಲ ರಾಜ್ಯಗಳಲ್ಲೂ ನಿಯಮ ಒಂದೇ ಅನ್ವಯ ಆಗಬೇಕಲ್ಲವೆ? ಎಂದವರು ಪ್ರಶ್ನಿಸಿದರು. ಈಚೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರನ್ನು ದೆಹಲಿಗೆ ಕರೆಸಿ 3 ದಿನ ಕಾಯಿಸಿದರು. ಐದು ನಿಮಿಷ ಮಾತನಾಡುವಷ್ಟು ಸೌಜನ್ಯ ವರಿಷ್ಠರು ತೋರಲಿಲ್ಲ ವೇಕೆ? ಇನ್ನು, ವಯಸ್ಸಿನ ನೆಪದಲ್ಲಿ ಲಾಲಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರನ್ನು ಮನೆಗೆ ಕಳುಹಿಸಿದರು. ಆದರೆ, 3-4 ಮಾಜಿ ಮುಖ್ಯಮಂತ್ರಿಗಳೂ ಸೇರಿ, ಈಗ 80 ವರ್ಷ ಆದವರಿಗೂ ಟಿಕೆಟ್ ನೀಡಿದ್ದಾರೆ. ಇದಕ್ಕೆ ಮೂಲ ಕಾರಣ ಜಗದೀಶ್ ಶೆಟ್ಟರ್ ಪ್ರಭಾವ ಎಂದವರು ಪ್ರತಿಪಾದಿಸಿದರು.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...