ಬಿಗ್ ಬಾಸ್ ಗೆ ಹೋಗಬೇಕು ಎಂದು ಕಿಚ್ಚನ ಮನೆ ಎದುರು ವ್ಯಕ್ತಿಯ ಹೈಡ್ರಾಮ

Date:

ಬೆಂಗಳೂರು: ಕಿಚ್ಚನ ಮನೆ ಮುಂದೆ ವ್ಯಕ್ತಿಯೊಬ್ಬನ ಅತಿರೇಕದ ವರ್ತನೆ ಕಂಡು ಸೆಕ್ಯೂರಿಟಿ ಗಾರ್ಡ್ ಗಳು ಶಾಕ್ ಆಗಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗೋಕೆ ಅವಕಾಶ ಮಾಡಿ ಕೊಡಿ ಅಂತ ರಾತ್ರೋ ರಾತ್ರಿ ಕಿಚ್ಚನ ಮನೆ ಮುಂದೆ ವ್ಯಕ್ತಿಯೊಬ್ಬ ಹೈ ಡ್ರಾಮ ಮಾಡಿದ್ದಾನೆ.
ಚಾನ್ಸ್ ಕೇಳೋಕೆ ಅಂತ ಎತ್ತಿನ ಗಾಡಿ ಮೂಲಕ ಬಂದಿರೋ ಮಂಜು ಅನ್ನೋ ವ್ಯಕ್ತಿ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ 10ಗಂಟೆವರೆಗೂ ಸುದೀಪ್ ಮನೆ ಮುಂದೆ ಕಾದು ನಿಂತಿದ್ದಾನೆ. ಟಿ ನರಸಿಪುರದಿಂದ ಬಂದಿದಿನಿ ಅಂತ ಹೇಳಿದ್ದ ಮಂಜು, ನಾವು ಅನಕ್ಷರಸ್ತರು ರೈತರು ಬಿಗ್ ಬಾಸ್ ಹೋಗಲು ಅವಕಾಶ ಕೊಡಿ ಅಂತ ಎತ್ತಿನ ಗಾಡಿ ತಂದು ಸುದೀಪ್ ಮನೆ ಮುಂದೆ ನಿಲ್ಲಿಸಿದ್ದ. ನಂತರ ಸುದೀಪ್ ಮನೇಲಿಲ್ಲ ಚೆನ್ನೈ ಹೋಗಿದ್ದಾರೆ ಅಂತ ಹೇಳಿ ಸೆಕ್ಯುರಿಟಿ ಮನವಿ ಮಾಡಿ ಕಳಿಸಿದ್ದಾರೆ.
ಮಂಜು ಹೇಳುವ ಪ್ರಕಾರ ಮನೆಯೊಳಗಿದ್ದ ವ್ಯಕ್ತಿಯೊಬ್ಬ ಮಂಜುಗೆ ಅವಾಚ್ಯಶಬ್ದಗಳಿಂದ ನಿಂದನೆ ಮಾಡಿದ್ರಂತೆ. ಧಮಾಕಿ ಸಹ ಹಾಕಿದ್ದಾರೆ ಅಂತ ಆರೋಪಿಸಿದ್ದಾನೆ. ಎತ್ತಿನ ಗಾಡಿಗೆ ಬ್ಯಾನರ್ ಕಟ್ಕೊಂಡ್ ಬಂದು ಜೆಪಿ ನಗರದ ಸುದೀಪ್ ಮನೆ ಮುಂದೆ ಗಾಡಿ ನಿಲ್ಲಿಸಿದ್ದ ಮಂಜುಗೆ ಬುದ್ದಿ ಹೇಳಿ ಕಳಿಸಲಾಗಿದೆ ಅನ್ನೋ ಮಾಹಿತಿ ಸಿಕ್ಕಿದೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...