ಸ್ಪೀಕರ್ ಸ್ಥಾನಕ್ಕೆ ಅಪಮಾನ: ರಾಜ್ಯಾದ್ಯಂತ ಜಮೀರ್ ವಿರುದ್ಧ ಪ್ರತಿಭಟನೆ

Date:

ಬೆಂಗಳೂರು: ಸ್ಪೀಕರ್ ಪೀಠದ ಕುರಿತು ಸಚಿವ ಜಮೀರ್ ಅಹ್ಮದ್ ಅವರು ಆಡಿದ ಮಾತನ್ನು ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲು ತೀರ್ಮಾನಿಸಿದೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಕಪ್ಪುಚುಕ್ಕಿ ಇಡುವ ರೀತಿಯಲ್ಲಿ ಜಮೀರ್ ಅಹ್ಮದ್ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸಿ ಮತ್ತು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಒತ್ತಾಯಿಸಿ ಎಸ್‌ಸಿ ಮೋರ್ಚಾ ವತಿಯಿಂದ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಡಿಸೆಂಬರ್ 2, 3 ಅಥವಾ ಸದನ ನಡೆಯುವಾಗಲೇ 4ರಂದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಸಚಿವ ಜಮೀರ್ ಅಹ್ಮದ್ ಅವರು ಮಂತ್ರಿಯಾಗಿ ಮುಂದುವರಿಯಲು ಯೋಗ್ಯರಲ್ಲ. ಆ ಕಾರಣದಿಂದ ಅವರು ಬೆಳಗಾವಿಯಲ್ಲಿ ನಡೆಯುವ ಸದನಕ್ಕೆ ಅವರು ಹಾಜರಾಗಬಾರದು ಎಂದು ಆಗ್ರಹಿಸಿದರು.

Share post:

Subscribe

spot_imgspot_img

Popular

More like this
Related

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ: ನಟ ಅನಂತನಾಗ್‌ ಭಾವುಕ

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ ಎಂದು ನಟ ಅನಂತನಾಗ್‌ ಭಾವುಕರಾದರು. ನವರಾತ್ರಿಯ...

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...