ರಾಜಗುರು ಗೋದಾಮಿನ ಸಂಸ್ಕರಣ ಘಟಕ ಕುಸಿತ ಕೇಸ್: 3 ಮೃತದೇಹಗಳು ಪತ್ತೆ

By
1 Min Read

ವಿಜಯಪುರ: ಇಲ್ಲಿನ ರಾಜಗುರು ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿದು, ಮೂವರು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಿಜಯಪುರದ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಇಂಡಸ್ಟ್ರೀಸ್ನ ಗೋದಾಮಿನಲ್ಲಿ ಈ ದುರಂತ ಸಂಭವಿಸಿದೆ.
ರಾಜೇಶ್ ಮುಖಿಯಾ(25), ರಾಮ್ರೀಜ್ ಮುಖಿಯಾ(29), ಶಂಭು ಮುಖಿಯಾ(26) ಮೃತ ಕಾರ್ಮಿಕರು. ಅವಶೇಷಗಳ ಅಡಿಯಲ್ಲಿ ಇನ್ನೂ 6-7 ಮಂದಿ ಸಿಲುಕಿದ್ದು, ಮೃತಪಟ್ಟಿರುವ ಶಂಕೆಯೂ ವ್ಯಕ್ತವಾಗಿದೆ. ಎಸ್ಡಿಆರ್ಎಫ್ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ. ಮೃತ ಕಾರ್ಮಿಕರೆಲ್ಲರೂ ಬಿಹಾರ ಮೂಲದವರು ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಆ ಕಾರ್ಮಿಕರು ಇದೇ ಇಂಡಸ್ಟ್ರೀಜ್ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

Share This Article