ಮುಂದಿನ ತಿಂಗಳು ಹಸೆಮಣೆಗೆ ಏರಬೇಕಿದ್ದ ಆಟೋ ಚಾಲಕನ ಬರ್ಬರ ಕೊಲೆ !

By
1 Min Read

ಬೆಂಗಳೂರು: ಬೆಂಗಳೂರಿನ ಟಿಂಬರ್ಲೇಔಟ್ನಲ್ಲಿ ಆಟೋ ಚಾಲಕ ಇನ್ನೇನು ಬ್ರಹ್ಮಚರ್ಯದಿಂದ ಗೃಹಸ್ತಾಶ್ರಮಕ್ಕೆ ಕಾಲಿಡುತ್ತಿರಬೇಕು ಎನ್ನುವಷ್ಟರಲ್ಲೇ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಂದಿರುವ ಘಟನೆ ಜರುಗಿದೆ. 24 ವರ್ಷದ ಅರುಣ್ಗೆ ಕೊಲೆಯಾದ ದುರ್ದೈವಿ. ಮುಂದಿನ ತಿಂಗಳು ಮದುವೆ ಫಿಕ್ಸ್ ಆಗಿತ್ತು. ಆದ್ರೆ, 10ಕ್ಕೂ ಹೆಚ್ಚು ದುಷ್ಕರ್ಮಿಗಳು ಅರಣ್ನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ಪರಿಶೀಲಿಸಿದ್ದು, ಕೊಲೆಗೆ ಕಾರಣವೇನು ಎನ್ನುವುದನ್ನು ತನಿಖೆ ಕೈಗೊಂಡಿದ್ದಾರೆ. ಆಟೋ ಚಾಲಕ ಅರುಣ್ ಯುವತಿಯೊಬ್ಬಳನ್ನ ಪ್ರೀತಿಸುತ್ತಿದ್ದ. ಆ ಪ್ರೀತಿಯೊಂದಿಗೆ ಮದುವೆಯಾಗಿ ಸಂಸಾರ ಶುರು ಮಾಡಬೇಕಿದ್ದ. ಅದಕ್ಕೆ ಅಂತಾಲೇ ಮುಂದಿನ ತಿಂಗಳು ಮದುವೆ ಫಿಕ್ಸ್ ಆಗಿತ್ತು ಎಂದು ತಿಳಿದು ಬಂದಿದೆ.

Share This Article