No menu items!
20.9 C
Munich
Friday, August 21, 2026

ಹಿಜಾಬ್ ನಿಷೇಧ ವಾಪಸ್: ಸತೀಶ್ ಜಾರಕಿಹೊಳಿ ಹೇಳಿದ್ದೇನು..?

Must read

ಬೆಳಗಾವಿ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಹಿಜಾಬ್ ನಿಷೇಧ ವಾಪಸ್ ತೆಗೆದುಕೊಳ್ಳುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದೆವು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಮ್ಮ ಸರ್ಕಾರದ ನಿಲುವನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಂಚೆ ತರಗತಿಗಳಲ್ಲಿ ಹಿಜಾಬ್ ಧಾರಣೆಗೆ ಅವಕಾಶವಿತ್ತು. ಹಿಂದಿನ ಸರ್ಕಾರ ನಿಷೇಧಿಸಿತ್ತು. ನಾವು ಅದನ್ನು ಹಿಂಪಡೆಯುತ್ತೇವೆ. ಈ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿದೆ. ನಮ್ಮ ನಿರ್ಧಾರವನ್ನು ಕೋರ್ಟ್‌ಗೆ ಹೇಳುತ್ತೇವೆ ಎಂದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು ಹತ್ತು ಸಾವಿರ ಕೋಟಿ ರೂ. ರಸ್ತೆ ಯೋಜನೆಗಳಿವೆ. ಇದರಲ್ಲಿ ಎರಡು ಸಾವಿರ ಕೋಟಿ ರೂ. ಖರ್ಚಾಗಿದೆ. ಇನ್ನೂ ಎಂಟು ಸಾವಿರ ಕೋಟಿ ಹಣ ಖರ್ಚಾಗಬೇಕು. ಈ ಹಣವನ್ನು ಖರ್ಚು ಮಾಡದಿದ್ದರೆ ಕಾಮಗಾರಿ ಬಂದ್ ಮಾಡುತ್ತಾರೆ. ರಸ್ತೆ ಕಾಮಗಾರಿಗೆ ತೊಂದರೆ ಇರುವುದನ್ನು ಸರಿಪಡಿಸಬೇಕು. ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದೇನೆ. ರಾಷ್ಟ್ರೀಯ ಹೆದ್ದಾರಿ ಸಲುವಾಗಿ ಚರ್ಚೆಯಾಗಿದೆ. ಸುಮಾರು 12 ವರ್ಷದಿಂದ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಸ್ಥಗಿತಗೊಂಡಿವೆ. ಆರು ತಿಂಗಳಿಂದ ಈ ಎಲ್ಲ ಯೋಜನೆ ಪರಿಹರಿಸಲು ಪ್ರಯತ್ನಿಸಲಾಗಿದೆ. ನಿನ್ನೆ ಒಂದೊಂದಾಗಿ ಚರ್ಚೆ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article