No menu items!
20.9 C
Munich
Friday, August 21, 2026

ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ !

Must read

ಉಡುಪಿ: ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ.
ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ಆದ್ರೆ ನಾನಂತೂ ದೈವಿ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ. ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article