ಊರಿಗೆಲ್ಲಾ ಉಪದೇಶ ಮಾಡುತ್ತೀರಿ, ನಿಮ್ಮ ಕಾರ್ಯಕರ್ತರಿಗೆ ಬುದ್ದಿ ಹೇಳಿ !

Date:

ಬೆಂಗಳೂರು: ಶಾಸಕರನ್ನು ಪ್ರಶ್ನಿಸಿದರು ಎನ್ನುವ ಕಾರಣಕ್ಕೆ ಚಿಕ್ಕಬಳ್ಳಾಪುರದ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರದೀಪ್ ಈಶ್ವರ್ ಬೆಂಬಲಿಗರನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಆಗ್ರಹಪಡಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್,
ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿ ರೌಡಿಗಳಂತೆ ವರ್ತಿಸಿ ನಮ್ಮ ಕಾರ್ಯಕರ್ತರ ಮೇಲೆ ಧಮ್ಕಿ ಹಾಕಿ, ಜೀವ ಬೆದರಿಕೆ ಒಡ್ಡುತ್ತಿರುವ ಘಟನೆಗಳು ಗಮನಕ್ಕೆ ಬಂದಿವೆ. ಚಿಕ್ಕಬಳ್ಳಾಪುರ ಕ್ಷೇತ್ರ ಜನರ ಸ್ವತ್ತೇ ಹೊರತು ಶಾಸಕರಾದ ಪ್ರದೀಪ್ ಈಶ್ವರ್ ಅಥವಾ ಕಾಂಗ್ರೆಸ್ ಪಕ್ಷದ ಜಹಗೀರಲ್ಲ. ಈ ಅಂಶವನ್ನು ಕಾಂಗ್ರೆಸ್ ಗೂಂಡಾಗಳು ಅರ್ಥ ಮಾಡಿಕೊಂಡರೆ ಒಳಿತು ಎಂದು ಎಚ್ಚರಿಕೆ ನೀಡಿದೆ.
ಹಿರಿಯ ಸಹಕಾರಿ ಧುರೀಣರು, ಮಾಜಿ ಶಾಸಕರು ಹಾಗೂ ನಮ್ಮ ಗೌರವಾನ್ವಿತ ನಾಯಕರು, ಜನಾನುರಾಗಿಗಳು ಆಗಿದ್ದ ಶ್ರೀ ಕೆ.ಬಿ.ಪಿಳ್ಳಪ್ಪನವರ ವಿಗ್ರಹ ಸ್ಥಾಪನೆ ಮಾಡುವ ಬಗ್ಗೆ ಸ್ವತಃ ಶಾಸಕ ಪ್ರದೀಪ್ ಈಶ್ವರ್ ಅವರೇ ನೀಡಿದ್ದ ಭರವಸೆಯನ್ನು ಆರು ತಿಂಗಳಾದರೂ ಈಡೇರಿಸದ ಬಗ್ಗೆ ನಮ್ಮ ಕಾರ್ಯಕರ್ತ ಅಕಿಲ್ ರೆಡ್ಡಿ ಅವರು ಪ್ರಶ್ನೆ ಮಾಡಿದ್ದಾರೆ. ಪ್ರಶ್ನಿಸುವುದೇ ಅಪರಾಧವೇ? ಶಾಸಕರು ಪ್ರಶ್ನಾತೀತರೇ? ಧಮ್ಕಿ, ಬೆದರಿಕೆ ಹಾಕಿರುವ ವರ್ತನೆ ಖಂಡನೀಯ ಎಂದು ಜೆಡಿಎಸ್ ಕಿಡಿಕಾರಿದೆ

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...