No menu items!
12.1 C
Munich
Saturday, September 12, 2026

ದೇಶದ ಬೆನ್ನೆಲುಬು ರೈತನಿಗೆ ಮೆಟ್ರೋದಲ್ಲಿ ಅವಮಾನ..!

Must read

ಬೆಂಗಳೂರು: ದೇಶದ ಬೆನ್ನೆಲುಬು ರೈತನಿಗೆ ಬೆಂಗಳೂರು ಮೆಟ್ರೋದಲ್ಲಿ ಅವಮಾನವಾಗಿದೆ. ಟಿಪ್ ಟಾಪ್ ಆಗಿ ಡ್ರೆಸ್ ಹಾಕೊಂಡ್ರೆ ಮಾತ್ರನಾ ಮೆಟ್ರೊದೊಳಗೆ ಎಂಟ್ರಿನಾ ಹಿಗೋಂದು ಅನುಮಾನ ಈ ದಿನದ ಘಟನೆಯಿಂದ ಕಾಡ ತೊಡಗಿದೆ. ಹೌದು ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.


ಬಿಎಂಆರ್‌ಸಿಎಲ್‌ ಸಿಬ್ಬಂದಿಯ ಅತಿರೇಕದ ವರ್ತನೆಯ ವೀಡಿಯೋ ಪ್ರಯಾಣಿಕರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಬಳಿಕ ಸಹಪ್ರಯಾಣಿಕರು ಸಿಬ್ಬಂದಿ ಬಗ್ಗೆ ತಲೆಕೆಡಿಸಿಕೊಳ್ಳದೆ, ವ್ಯಕ್ತಿಯನ್ನು ಮೆಟ್ರೋದಲ್ಲಿ ಕರೆದೊಯ್ದಿದ್ದಾರೆ. ಅಲ್ಲದೇ ಮೆಟ್ರೋ ಸಿಬ್ಬಂದಿ ವಿರುದ್ಧ ಸಹಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ವೀಡಿಯೋವನ್ನು ಜನ ಬಿಎಂಆರ್‌ಸಿಎಲ್‌ ಟ್ಯಾಗ್ ಮಾಡಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

- Advertisement -spot_img

More articles

- Advertisement -spot_img

Latest article