ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬ್ಯುಸಿನೆಸ್ʼಗೂ ಆಗಿರಬಹುದು !

Date:

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೇ ನೀಡಿದ್ದಾರೆ. ‘ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬ್ಯುಸಿನೆಸ್ʼಗೂ ಆಗಿರಬಹುದು, ಬಿಜೆಪಿಯವರಿಗೆ ಕೇವಲ ಹಿಂದೂ, ಮುಸ್ಲಿಮರು ಮಾತ್ರ ಕಾಣುತ್ತಿದ್ದಾರೆ. ಈ ಹಿಂದೆ ನಡೆದ ಹಲವು ಘಟನೆಗಳಲ್ಲಿ ಬಿಜೆಪಿಯವರ ಕೈವಾಡ ಇದೆ.
ಆದರೆ, ರಾಮೇಶ್ವರಂ ಕೆಫೆ ಸ್ಫೋಟ ಕೇಸ್ನಲ್ಲಿ ಬಿಜೆಪಿ ಕೈವಾಡ ಎಂದು ಹೇಳಲ್ಲ. ಈ ಹಿಂದೆ ಇಂತಹದ್ದೇ ಘಟನೆಗಳಾದಾಗ ಬಿಜೆಪಿಯ ಕೈವಾಡ ಇತ್ತು. ಇದು ತನಿಖೆಯಲ್ಲಿ ಸಾಬೀತು ಕೂಡ ಆಗಿದೆ ಎಂದು ಹೊಸ ಬಾಂಬ್ ಹಾಕಿದ್ದಾರೆ. ಇನ್ನು ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಸತ್ಯಾಂಶ ಹೊರ ಬರುತ್ತದೆ ಎಂದಿದ್ದಾರೆ.
ಇನ್ನೂ ಜಾತಿ ಗಣತಿ ವಿಚಾರ, ‘ಈ ವರದಿಯನ್ನ ತೆಗದುಕೊಳ್ಳಬೇಡಿ ಎಂದು ನಾವು ಹೇಳಿಲ್ಲ, ಸಿಎಂ ಅವರಿಗೆ ಮನೆ ಮನೆಗೆ ಹೋಗಿ ವರದಿ ಮಾಡಿಲ್ಲ, ಈ ರೀತಿ ಆಗಿರುವಂತ ಲೋಪದೋಷಗಳನ್ನು ಸರಿ ಪಡಿಸುವಂತೆ ಸ್ವಾಮೀಜಿಗಳು ಹಾಗೂ ನಮ್ಮ ಸಮುದಾಯದ ಮುಖಂಡರು ಮನವಿ ಕೊಟ್ಟಿದ್ದರು. ಈ ಕುರಿತಾಗಿ ಮುಖ್ಯಮಂತ್ರಿಗಳು ‘ವರದಿ ಬರಲಿ, ವ್ಯತ್ಯಾಸಗಳು ಇದ್ದರೆ ಸರಿಪಡಿಸೋಣ ಎಂದು ಹೇಳಿದ್ದಾರೆ. ಅದಕ್ಕೆ ವರದಿಯಲ್ಲಿನ ಲೋಪದೋಷಗಳು ಇದ್ರೆ ಸರಿಪಡಿಸುತ್ತಾರೆ ಎಂಬ ವಿಶ್ವಾಸ ನಮಗೆಲ್ಲ ಇದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...