ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ !

Date:

ಬೆಂಗಳೂರು: ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ ಎಂದು
ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ, ಘಟನೆ ಜರುಗಿದಾಗಿನಿಂದ ಸರ್ಕಾರವು ಎಫ್ ಎಸ್ ಎಲ್ ವರದಿ ಬಂದ ಬಳಿಕ ಕ್ರಮ ಜರುಗಿಸುವುದಾಗಿ ಹೇಳಿತ್ತು ಮತ್ತು ಮಾಧ್ಯಮದವರೂ ಪದೇಪದೆ ವರದಿ ಬಗ್ಗೆ ವಿಚಾರಿಸುತ್ತಿದ್ದರು ಎಂದ ಅವರು ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ದೃಢಪಟ್ಟ ಕೂಡಲೇ ಪೊಲೀಸರು ಮೂವರನ್ನು ಬಂಧಿಸಿ ಮ್ಯಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ .

ಮತ್ತು ನ್ಯಾಯಾಲಯದ ಅನುಮತಿ ಮೇರೆಗೆ ಅವರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ ಎಂದು ಹೇಳಿದರು. ಮುಂದುವರಿದು ಮಾತಾಡಿದ ಪರಮೇಶ್ವರ್, ಯಾವುದೋ ಒಂದು ಖಾಸಗಿ ಎಫ್ ಎಸ್ ಎಲ್ ವಿಡಿಯೋ ಪರೀಕ್ಷಣೆ ನಡೆಸಿ ಪಾಕ್ ಪರ ಘೋಷಣೆ ಕೂಗಿದ್ದನ್ನು ದೃಢಪಡಿಸಿತ್ತು. ಆದರೆ ಸರ್ಕಾರ ಅದನ್ನು ಅಧಿಕೃತ ಎಂದು ಪರಿಗಣಿಸುವುದಿಲ್ಲ, ಆ ಸಂಸ್ಥೆಯು ಸರ್ಕಾರದಿಂದ ಸರ್ಟಿಫೈಡ್ ಆಗಿರುವುದಿಲ್ಲ. ಸರ್ಕಾರದಿಂದ ಸರ್ಟಿಫೈ ಆಗಿರುವ ಸಂಸ್ಥೆಯ ವರದಿಯನ್ನು ಮಾತ್ರ ಅಧಿಕೃತವೆಂದು ಪರಿಗಣಿಸಲಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...