ಇಂದಿನಿಂದ ರಾಮೇಶ್ವರಂ ಕೆಫೆ ಓಪನ್: ಬೆಳಗ್ಗೆಯಿಂದಲೇ ಕೆಫೆಗೆ ಬರ್ತಿರೋ ಜನ

Date:

ಬೆಂಗಳೂರು: ಬಾಂಬ್ ಬ್ಲಾಸ್ಟ್ ಬಳಿಕ ಬಂದ್ ಆಗಿದ್ದ ಕೆಫೆ ಎಂಟು ದಿನಗಳ ಬಳಿಕ ಇಂದಿನಿಂದ ಮತ್ತೆ ಶುರುವಾಗುತ್ತಿದೆ. ಗ್ರಾಹಕರ ಭರ್ಜರಿ ಸ್ಪಂದನ ವ್ಯಕ್ತವಾಗಿದೆ. ಕಳೆದ ಶುಕ್ರವಾರ ಮಾರ್ಚ್ ಒಂದರಂದು ಮಧ್ಯಾಹ್ನ 12.55ಕ್ಕೆ ಬಾಂಬ್ ಬ್ಲಾಸ್ಟ್ ಆಗಿತ್ತು. ಇದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಆರೋಪಿಯ ಜಾಡು ಹಿಡಿದಿರುವ ಪೊಲೀಸರು ತಂಡಗಳನ್ನು ರಚಿಸಿಕೊಂಡು ಪಾತಕಿಯ ಹುಡುಕಾಟದಲ್ಲಿದ್ದಾರೆ. ಈ ನಡುವೆ ಒಂದು ವಾರದಿಂದ ತನಿಖೆ ಮತ್ತಿತರ ಪ್ರಕ್ರಿಯೆಗಳಿಗಾಗಿ ರಾಮೇಶ್ವರಂ ಕೆಫೆ ಬಂದ್ ಆಗಿತ್ತು.
ನಗರ ಪೊಲೀಸರು, ಎನ್ಐಎ ತಂಡ ಕೂಡ ಇಲ್ಲಿ ಬಂದು ಪರಿಶೀಲನೆ ನಡೆಸಿದ್ದರು. ಬಾಂಬ್ ಸ್ಫೋಟದಿಂದಾಗಿ ಪೀಠೋಪಕರಣಕ್ಕೆ ಹಾನಿಯಾಗಿತ್ತು. ಇದೀಗ ಎಲ್ಲವನ್ನು ಸರಿ ಪಡಿಸಿರುವ ಮಾಲೀಕರು ಇಂದಿನಿಂದ ಮತ್ತೆ ರಾಮೇಶ್ವರಂ ಕೆಫೆ ಶುರು ಮಾಡುತ್ತಿದ್ದಾರೆ. ಕೆಫೆಯನ್ನು ಮೊದಲಿಗಿಂತ ಹೆಚ್ಚಿನ ಭದ್ರತೆಯಲ್ಲಿ ಆರಂಭಿಸುತ್ತಿದ್ದು, ಪ್ರವೇಶಿಸುವಲ್ಲಿ ಹೊಸದಾಗಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಿದ್ದಾರೆ. ಸಂಶಯಾಸ್ಪದ ಜನರ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತಿದೆ. ಹೂವುಗಳು ಹಾಗೂ ತಳಿರು ತೋರಣಗಳಿಂದ ಕೆಫೆಯನ್ನು ಅಲಂಕರಿಸಲಾಗಿದೆ.

Share post:

Subscribe

spot_imgspot_img

Popular

More like this
Related

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...