ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್!?

Date:

ಬೆಂಗಳೂರು:- ಪುದುಚೇರಿ ಮತ್ತು ತಮಿಳುನಾಡು ಸರ್ಕಾರಗಳ ಬಳಿಕ ಈಗ ರಾಜ್ಯ ಸರ್ಕಾರವೂ ಅಸುರಕ್ಷಿತ ಕಾಟನ್‌ ಕ್ಯಾಂಡಿ, ಗೋಬಿಗೆ ನಿಯಂತ್ರಣ ಹೇರಲು ಮುಂದಾಗಿದೆ.

ಈ ಬಗ್ಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸುದ್ದಿಗೋಷ್ಠಿಗೂ ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ. ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಆ ಹಿನ್ನೆಲೆಯಲ್ಲಿ, ಇಂದು ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ. ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ಧಿಗೋಷ್ಠಿ ನಡೆಸಲು ಮುಂದಾಗಿದ್ದು ರಾಜ್ಯದಲ್ಲಿ ಅಸುರಕ್ಷಿತ ಗೋಬಿ ಹಾಗೂ ಕ್ಯಾಂಡಿ ಕೂಡ ಬ್ಯಾನ್ ಆಗುವ ಸಾಧ್ಯತೆ ಇದೆ.

ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 100ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿಗಳು ಅಸುರಕ್ಷಿತ ಎಂದು ವರದಿಯಲ್ಲಿಉಲ್ಲೇಖಿಸಿದ್ದಾಗಿ ತಿಳಿದು ಬಂದಿದೆ. ಇನ್ನು ತಜ್ಞರು ಕೂಡಾ ಈ ಆಹಾರ ಸೇವನೆ ಅಪಾಯಕಾರಿ ಎಂದಿದ್ದಾರೆ.

ಇನ್ನು ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್‌ಸೆಟ್‌ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್‌ ರಾಸಾಯನಿಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಎರಡೂ ತಿನಿಸುಗಳನ್ನು ನಿಷೇಧಿಸಲು ಮುಂದಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ವರದಿ ಆಧರಿಸಿ ಆರೋಗ್ಯ ಸಚಿವರು ಇಂದು ರಾಜ್ಯದಲ್ಲಿ ಇವುಗಳ ನಿಷೇಧ ಪ್ರಕಟಿಸುವ ಸಂಭವವಿದೆ. ಆದ್ರೆ ಇದಕ್ಕೆ ಗೋಬಿ ಮಾರಟಗಾರರು ಬೇಸರ ಹೊರ ಹಾಕಿದ್ದಾರೆ. ಇದನ್ನೇ ನಂಬಿ ಬದುಕು ಸಾಗಿಸುವವರ ಜೀವನ ಹೇಗೆ ಸರ್ಕಾರ ಅಪಾಯಕಾರಿಯಾದ ಅಂಶ ಬಳಕೆಗೆ ನಿಷೇಧ ಹಾಕಲಿ. ಆದ್ರೆ ಕಂಪ್ಲೀಟ್ ಬ್ಯಾನ್ ಮಾಡುವುದು ಬೇಡಾ ಎಂದು ಕೆಲ ಗೋಬಿ ಮಾರಾಟಗಾರರು ಮನವಿ ಮಾಡಿದ್ದಾರೆ.

ಒಟ್ನಲ್ಲಿ ಜನರ ಆರೋಗ್ಯದ ದೃಷ್ಠಿಯಿಂದ ಸರ್ಕಾರ ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದು ರಾಜ್ಯದಲ್ಲಿ ಗೋಬಿ ಹಾಗೂ ಕಾಟನ್ ಕ್ಯಾಂಡಿ ಬ್ಯಾನ್ ಆಗುವ ಸಾಧ್ಯತೆ ಇದೆ. ಈ ಕುರಿತಂತೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಗಳಿವೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...