ಬೆಂಗಳೂರು ನಗರದ ಕಲ್ಯಾಣ ಮಂಟಪಗಳಿಗೂ ತಟ್ಟಿದ ನೀರಿನ ಅಭಾವ..!

Date:

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕುಡಿಯೋ ನೀರಿಗೂ ಹಾಹಾಕಾರ ಶುರುವಾಗಿದೆ. ಇದರ ಬೆನ್ನಲ್ಲೇ ನಗರದ ಕಲ್ಯಾಣ ಮಂಟಪಗಳಿಗೂ ನೀರಿನ ಅಭಾವ ಉಂಟಾಗಿದ್ದು, ಈಗಾಗಲೇ ಬುಕ್ ಆಗಿರುವ ಮದುವೆಗಳಿಗೆ ನೀರು ಹೊಂದಿಸಲು‌ ಕಲ್ಯಾಣ ಮಂಟಪ ಮಾಲೀಕರು ಪರದಾಡುವಂತಾಗಿದೆ. ಬುಕ್ಕಿಂಗ್ ಆಗಿರುವ ಮದುವೆಗಳಿಗೆ 20% ನೀರಿಗಾಗಿ ಕೈಯಿಂದಲೇ ಹಾಕಬೇಕಾದ ಅನಿವಾರ್ಯತೆ ಎದುರಾಗಿದೆ. ನೀರಿನ ಅಭಾವ ಹಿನ್ನಲೆ ಹೊಸದಾಗಿ ಬುಕ್ಕಿಂಗ್ ತಗೆದುಕೊಳ್ಳಲು ಹಿಂದೇಟು ಹಾಕಲಾಗುತ್ತಿದೆ.
ಬುಕ್ಕಿಂಗ್ ಆದ ಮದುವೆಯನ್ನು ನಿಭಾಯಿಸುವುದು ಹೇಗೆ ಎನ್ನುವ ಚಿಂತೆಯಲ್ಲಿ ಕಲ್ಯಾಣ ಮಂಟಪಗಳ ಮಾಲೀಕರಿದ್ದಾರೆ. ಪ್ರತಿ ಛತ್ರಗಳಲ್ಲಿಯೂ ಮದುವೆಗಾಗಿ ಬುಕಿಂಗ್ ಆಗಿವೆ. ವಿವಾಹ, ಉಪನಯನಕ್ಕೆ ಮುಂಗಡ ಕಾಯ್ದಿರಿಸಲಾಗಿದೆ. ಬಹುತೇಕ ಎಲ್ಲ ಛತ್ರಗಳ ಬೋರ್ ಹೊಂದಿವೆ. ಆದರೆ ಆ ಬೋರ್ಗಳಲ್ಲಿ ಅಂತರ್ಜಲ ಬತ್ತಿ ಹೋಗಿದೆ.
ಒಂದು ಮದುವೆಗೆ ಕನಿಷ್ಟ ಪಕ್ಷ 5 ಸಾವಿರ ಲೀಟರ್ ನೀರು ಬೇಕು. ಹೀಗಾಗಿ ಒಂದು ಮದುವೆಗೆ ನಾಲ್ಕೈದು ಟ್ಯಾಂಕರ್ ನೀರು ಬೇಕೆ ಬೇಕು. ಬಿಬಿಎಂಪಿ ಟ್ಯಾಂಕರ್ ನೀರಿಗೆ ದರ ಫಿಕ್ಸ್ ಮಾಡಿದರೆ ಸಮಯಕ್ಕೆ ಟ್ಯಾಂಕರ್ ನೀರು ಬರಲ್ಲ. ಹೆಚ್ಚಿನ ಬೆಲೆಗೆ ಟ್ಯಾಂಕರ್ ನೀರು ಪಡೆಯಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಏಪ್ರಿಲ್, ಮೇನಲ್ಲಿ ಬ್ಯಾಕ್ ಟು ಬ್ಯಾಕ್ ಮದುವೆಗಳಿವೆ. ಈಗಲೇ ಹೀಗೆ ಆದರೆ ಮುಂದೆ ಹೇಗೆ ಎಂಬ ಆತಂಕ ಕಲ್ಯಾಣ ಮಂಟಪದವರಿಗೆ ಶುರುವಾಗಿದೆ.

Share post:

Subscribe

spot_imgspot_img

Popular

More like this
Related

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್ ನವದೆಹಲಿ: ಕರೂರಿನಲ್ಲಿ...

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!ಗದಗ: ರೋಗಿಗಳ ಸಾಗಾಟಕ್ಕೆ ಬಳಸಬೇಕಿದ್ದ ಆ್ಯಂಬ್ಯುಲೆನ್ಸ್‌ನಲ್ಲಿ...

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ ನೋಡಿ

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ...