ಬೆಂಗಳೂರು: “ಲೋಕಸಭೆ ಅಭ್ಯರ್ಥಿ ಆಯ್ಕೆ ಸಂಬಂಧ ಸ್ಥಳೀಯ ಮಟ್ಟದಲ್ಲಿ ವಿಚಾರ, ಅಭಿಪ್ರಾಯಗಳನ್ನು ಸಂಗ್ರಹಿಸಿ ಹೈಕಮಾಂಡ್ ನಾಯಕರಿಗೆ ಕಳುಹಿಸುವುದು ನಮ್ಮ ಕರ್ತವ್ಯ. ನಾವು ಅದನ್ನು ಮಾಡಿದ್ದೇವೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ತಿ ಅವರು ತಿಳಿಸಿದರು. ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಎಲ್ಲಾ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.
ಸಿಇಸಿ ಸಭೆ ಸೋಮವಾರಕ್ಕೆ ಮುಂದೂಡಿಕೆಯಾಗಿರುವ ಬಗ್ಗೆ ಕೇಳಿದಾಗ, “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿದ್ದಾರೆ. ಅವರು ವೈದ್ಯರಿಂದ ಸಮಯ ಪಡೆದಿದ್ದ ಕಾರಣ ಇಲ್ಲಿಗೆ ಆಗಮಿಸಿದ್ದಾರೆ ಎಂದರು. ಬಿಜೆಪಿಯಲ್ಲಿನ ಟಿಕೆಟ್ ಗೊಂದಲದ ಬಗ್ಗೆ ಕೇಳಿದಾಗ, “ಬಿಜೆಪಿ ಪಕ್ಷದ ಟಿಕೆಟ್ ವಿಚಾರವನ್ನು ಅವರ ಪಕ್ಷದವರು ನೋಡಿಕೊಳ್ಳುತ್ತಾರೆ” ಎಂದರು.
ಲೋಕಸಭೆ ಟಿಕೆಟ್ ಹಂಚಿಕೆ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ನಿರ್ಧಾರ !
Date: