ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ !

Date:

ಶಿವಮೊಗ್ಗ: ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡ್ತೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡ್ತೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ತಂದೆ ಮಕ್ಕಳ ಕೈಗೆ ಪಕ್ಷ ಸಿಕ್ಕಿದೆ, ಕಾರ್ಯಕರ್ತರು ಪರದಾಡ್ತಿದ್ದಾರೆ. ಪಕ್ಷ ಉಳಿಸಲು ನನ್ನ ಈ ಹೋರಾಟ ಎಂದರು.
ಪಕ್ಷ ತಂದೆ ಮಕ್ಕಳ ಕೈಗೆ ಸಿಕ್ಕಿದೆ. ಇದರಿಂದ ಕಾರ್ಯಕರ್ತರು ಪರದಾಡುತ್ತಿದ್ದಾರೆ. ಪಕ್ಷ ಉಳಿಸಲು ನನ್ನ ಈ ಹೋರಾಟ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ಲಿಂಗಾಯತ ಯತ್ನಾಳ್, ಒಕ್ಕಲಿಗರಾದ ಸಿ.ಟಿ.ರವಿ, ಹಿಂದುಳಿದ ನನಗೆ ಯಾಕೆ ಕೊಟ್ಟಿಲ್ಲ. ಪಕ್ಷ ಸಂಘಟನೆ ದೃಷ್ಟಿಯಿಂದ ಇವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕಿತ್ತು.
ಅದು ಬಿಟ್ಟು ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರು. ನಾನು ಹಿಂದುತ್ವದ ವಿಚಾರದ ಮೇಲೆ ಚುನಾವಣೆ ಮಾಡುತ್ತೇನೆ. ರಾಘವೇಂದ್ರ ಲಿಂಗಾಯತ ಅಂತಾ ಚುನಾವಣೆ ಮಾಡುತ್ತಾರೆ. ಅವರು ಲಿಂಗಾಯತರಿಗೆ ಏನು ಕೊಟ್ಟಿದ್ದಾರೆ? ಅವರಿಗೆ ಮಾತ್ರ ಲಿಂಗಾಯತರು ಸಿಮೀತ ಆಗಿಲ್ಲ. ನಮ್ಮ ಜೊತೆ ಕೂಡಾ ಈ ಸಮಾಜ ಇದೆ. ಸ್ಪರ್ಧೆ ಬಗ್ಗೆ ಘೋಷಣೆ ಬಳಿಕ ರಾಜ್ಯಾದ್ಯಂತ ಬೆಂಬಲ ಸಿಗ್ತಿದೆ. ರಾಜ್ಯದ ವಿವಿಧ ಭಾಗದಿಂದ ಜನ ಬಂದು ಚುನಾವಣೆ ಮಾಡುತ್ತಾರೆ ಎಂದರು.

Share post:

Subscribe

spot_imgspot_img

Popular

More like this
Related

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್ ನವದೆಹಲಿ: ಕರೂರಿನಲ್ಲಿ...

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!ಗದಗ: ರೋಗಿಗಳ ಸಾಗಾಟಕ್ಕೆ ಬಳಸಬೇಕಿದ್ದ ಆ್ಯಂಬ್ಯುಲೆನ್ಸ್‌ನಲ್ಲಿ...

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ ನೋಡಿ

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ...