ಕಾಂಗ್ರೆಸ್ʼಗೆ ಭ್ರಷ್ಟಾಚಾರವೇ ಉಸಿರಾಗಿದೆ !

Date:

ಕಲುಬುರಗಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಜನರ ಮನಸ್ಸಿನಲ್ಲಿ ಭರವಸೆಯೇ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಕಾಂಗ್ರೆಸ್ʼಗೆ ಭ್ರಷ್ಟಾಚಾರವೇ ಉಸಿರಾಗಿದೆ ಎಂದರು. ಚುನಾವಣೆಗೂ ಮೊದಲೇ ದೊಡ್ಡದೊಡ್ಡ ಭರವಸೆ ನೀಡಿದರು.
ಚುನಾವಣೆಗೂ ಮೊದಲು ಫ್ರೀ ಕರೆಂಟ್ ಎಂದು ಹೇಳಿದರು. ಈಗ ನೋಡಿದ್ರೆ ಕರೆಂಟ್ ಕೂಡ ಇಲ್ಲ ಏನೂ ಇಲ್ಲ. ಚುನಾವಣೆ ಬಳಿಕ ನಿಮ್ಮ ಜೇಬಿಗೆ ಕೈಹಾಕಿದರು ಎಂದು ಹೇಳುವ ಮೂಲಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದರು. ಅಲ್ಲದೆ, ರೈತರಿಗೆ ಈ ಸರ್ಕಾರ ಮೋಸ ಮಾಡಿದೆ ಎಂದರು.
ನಾನು 2 ದಿನಗಳಲ್ಲಿ 4 ದಕ್ಷಿಣ ರಾಜ್ಯಗಳಿಗೆ ಭೇಟಿ ನೀಡಿದೆ. ದಕ್ಷಿಣ ಭಾರತ ರಾಜ್ಯಗಳಲ್ಲಿ ಬಿಜೆಪಿ ಬಗ್ಗೆ ಉತ್ಸುಕತರಾಗಿದ್ದಾರೆ. ಜನರ ಉತ್ಸಾಹ ನೋಡಿ ನನಗೆ ಬಹಳ ಆನಂದವಾಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಬಗ್ಗೆ ಜನ ಆಕ್ರೋಶಗೊಂಡಿದ್ದಾರೆ ಎಂದು ಹೇಳುವ ಮೂಲಕ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರ ಇಷ್ಟು ಬೇಗ ಜನರ ಆಕ್ರೋಶಕ್ಕೆ ಗುರಿಯಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...