No menu items!
17.7 C
Munich
Friday, May 1, 2026

ನೀತಿ ಸಂಹಿತೆ ಜಾರಿ: ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣ ಜಪ್ತಿ

Must read

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ರೂಪಾಯಿಯನ್ನು ಅಶೋಕನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಪೊಲೀಸರು ಅಲರ್ಟ್ ಆಗಿದ್ದು, ಅಕ್ರಮವಾಗಿ ಸಾಗಿಸುವ ಹಣದ ಮೇಲೆ ಕಣ್ಣಿಟ್ಟಿದ್ದಾರೆ.
ಅದರಂತೆ ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ರೂಪಾಯಿಯನ್ನು ಅಶೋಕನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ಪರಿಶೀಲನೆ ವೇಳೆ ಹಣ ಪತ್ತೆಯಾಗಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article