ತಮಿಳು ಸಿನಿಮಾದ ಅವಕಾಶಗಿಟ್ಟಿಸಿಕೊಂಡ ರೂಪೇಶ್ ಶೆಟ್ಟಿ…!

Date:

ತುಳುನಾಡ ಕುವರ ರೂಪೇಶ್ ಶೆಟ್ಟಿ ಈಗ ತಮಿಳು ಸಿನಿರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರ್ಕಸ್ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಸಕ್ಸಸ್ ಕಂಡಿದ್ದ ರಾಕ್ ಸ್ಟಾರ್ ಸ್ಯಾಂಡಲ್ ವುಡ್ ನಲ್ಲಿ ಅಧಿಪತ್ರ ಹೊರಡಿಸಿದ್ದಾರೆ. ಬಿಗ್ ಬಾಸ್ ನಿಂದ ಹೊರಬಂದ ತಕ್ಷಣ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವವರ ನಡುವೆ ರೂಪೇಶ್ ಅಳೆದು ತೂಗಿ ಅಧಿಪತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಪತ್ರ ಚಿತ್ರದ ಜೊತೆಗೆ ಮತ್ತೆರೆಡು ಹೊಸ ಕನ್ನಡ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರೂಪೇಶ್ ಈಗ ತಮಿಳು ಸಿನಿಮಾರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ.

ಬಿಗ್ ಬಾಸ್ ಸೀಸನ್ 9 ವಿನ್ನರ್ ಆಗಿರುವ ರಾಕ್ ಸ್ಟಾರ್ ರೂಪೇಶ್, ಸನ್ನಿಧಾನಮ್ P. O ಎಂಬ ತಮಿಳು ಪ್ರಾಜೆಕ್ಟ್ ನಲ್ಲಿ ನಟಿಸಿದ್ದಾರೆ. ವಿಶೇಷ ಅಂದ್ರೆ ತಮಿಳು ಸಿನಿರಂಗದ ಹಾಸ್ಯ ದಿಗ್ಗಜ ಯೋಗಿಬಾಬು ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸ್ತಿದ್ದು, ಅವರ ಜೊತೆ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವ ಸಂತಸದಲ್ಲಿದ್ದಾರೆ ರೂಪೇಶ್.

ಮಧುರಾವ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದು, ಅಮುದ ಸಾರಥಿ ನಿರ್ದೇಶನ ಮಾಡಲಿದ್ದಾರೆ. ಈಗಾಗಲೇ ಸನ್ನಿಧಾನಮ್ P. O ಚಿತ್ರದ ಎರಡನೇ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಜೂನ್ ನಲ್ಲಿ ಸಿನಿಮಾ ತೆರೆಗೆ ತರಲು ಚಿತ್ರತಂಡ ತಯಾರಿ ನಡೆಸುತ್ತಿದೆ. ನಾಲ್ಕು ಭಾಷೆಯಲ್ಲಿ ಸನ್ನಿಧಾನಮ್ P. O ನಿರ್ಮಾಣವಾಗುತ್ತಿದೆ.

ತುಳು ಚಿತ್ರರಂಗದಲ್ಲಿ ನಾನಾ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಾ, ನಟನಾಗಿ, ನಿರ್ದೇಶಕನಾಗಿ ನೆಲೆ ಕಂಡುಕೊಂಡಿದ್ದವರು ರೂಪೇಶ್ ಶೆಟ್ಟಿ. ಅದರ ಬೆನ್ನಲ್ಲೇ ಬಿಗ್ಬಾಸ್ ವಿಜೇತರಾಗಿಯೂ ಹೊರಹೊಮ್ಮಿದರು. ಬಳಿಕ ಕನ್ನಡದ ಸಿನಿಮಾ ಅವಕಾಶಗಳ ಬಾಗಿಲೂ ತೆರೆಯಿತು. ತುಳು, ಕನ್ನಡ ಮಾತ್ರವಲ್ಲ ತೆಲುಗು, ಕೊಂಕಣಿ ಭಾಷೆಯಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ರೂಪೇಶ್ ಅವರನ್ನು ತಮಿಳುಚಿತ್ರರಂಗ ರತ್ನ ಕಂಬಳಿ ಹಾಸಿ ಸ್ವಾಗತಿಸಿದೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...