ಮಾರ್ಚ್ 22 ರಂದು ಮೂರನೇ ಪಟ್ಟಿ ಬಿಡುಗಡೆ: ಬಿ.ಎಸ್.ಯಡಿಯೂರಪ್ಪ

Date:

ನವದೆಹಲಿ: ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಮಾರ್ಚ್ 22 ರಂದು ಪಟ್ಟಿ ಘೋಷಣೆಯಾಗುತ್ತದೆ. ಅಮಿತ್ ಶಾ, ಜೆ.ಪಿ ನಡ್ಡಾ ಅವರ ಜೊತೆ ಐದು ಕ್ಷೇತ್ರಗಳ ಬಗ್ಗೆ ಚರ್ಚಿಸಿದ್ದೇವೆ. ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸುತ್ತೇವೆ ಎಂದರು.
ಇನ್ನೂ ಜೆ.ಸಿ.ಮಾಧುಸ್ವಾಮಿ ಸಹಕಾರದಿಂದ ನಾವು ಚುನಾವಣೆ ಗೆಲ್ಲಬೇಕಿದೆ. ಕರಡಿ ಸಂಗಣ್ಣ ಜೊತೆಗೆ ಮಾತನಾಡಿದ್ದೇನೆ. ಅವರು ನಿಷ್ಠಾವಂತ ಮುಖಂಡರು. ಅವರು ಬೇರೆ ಯಾವ ನಿರ್ಧಾರ ತೆಗೆದುಕೊಳ್ಳಬಾರದು. ಮುಂದೆ ಅವರಿಗೆ ಸೂಕ್ತ ಸ್ಥಾನ ಮಾನ ನೀಡಲಾಗವುದು. ಅಸಮಾಧಾನಗೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಬೇಕು ಎಂದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...