No menu items!
16.8 C
Munich
Thursday, July 23, 2026

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಕ್ತು ಬಿಜೆಪಿ ಸೇರೋದಕ್ಕೆ ಗ್ರೀನ್ ಸಿಗ್ನಲ್

Must read

ಬೆಂಗಳೂರು: ಕೊನೆಗೂ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಜೆಪಿ ಸೇರೋದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೌದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ, ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿ ನಾಳೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಪಕ್ಷ ಸೇರ್ಪಡೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಯಾವುದೇ ಷರತ್ತುಗಳು ಇಲ್ಲದೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಸಂಜೆ 4 ಗಂಟೆಗೆ ಜನಾರ್ನದ ರೆಡ್ಡಿ ಕೆಆರ್‌ಪಿಪಿ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ. ಕೆಆರ್‌ಪಿಪಿ ವಿಲೀನಕ್ಕೆ ಬಿಜೆಪಿ ಆಫರ್ ನೀಡಿದ್ದು ಈ ವಿಚಾರದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ.

- Advertisement -spot_img

More articles

- Advertisement -spot_img

Latest article