ಪುಷ್ಪ ಡೈರೆಕ್ಟರ್ ಜೊತೆ ಮತ್ತೆ ಕೈ ಜೋಡಿಸಿದ ಗ್ಲೋಬಲ್ ಸ್ಟಾರ್ ರಾಮ್..!

Date:

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೋಳಿ ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್, ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಆರ್ ಸಿ 16 ಸಿನಿಮಾಗೆ ಬುಚ್ಚಿ ಬಾಬು ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಟೇಕಾಫ್ ಗೂ ಮೊದ್ಲೇ ಚೆರ್ರಿಯ ಮತ್ತೊಂದು ಸಿನಿಮಾ ಅನೌನ್ಸ್ ಆಗಿದೆ.

ಮೈತ್ರಿ ಮೂವೀ ಮೇಕರ್ಸ್, ರಾಮ್ ಚರಣ್ ಹಾಗೂ ಪುಷ್ಪ ಡೈರೆಕ್ಟರ್ ಸುಕುಮಾರ್ ಮತ್ತೆ ಒಂದಾಗಿದ್ದಾರೆ. ರಂಗಸ್ಥಳಂ ಮೂಲಕ ಧಮಾಕ ಎಬ್ಬಿಸಿದ್ದ ಈ ತ್ರಿವಳಿ ಕಾಂಬೋದಲ್ಲಿ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದೆ. ಬಣ್ಣದ ಹಬ್ಬದ ಸಂದರ್ಭದಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ.

ತ್ರಿಬಲ್ ಆರ್ ಸಿನಿಮಾ ಬಳಿಕ ಶಂಕರ್ ಸಾರಥ್ಯದ ಗೇಮ್ ಚೇಂಜರ್ ಚಿತ್ರದಲ್ಲಿ ರಾಮ್ ನಟಿಸ್ತಿದ್ದಾರೆ. ಜೊತೆಗೆ ಉಪ್ಪೇನಾ ಡೈರೆಕ್ಟರ್ ಬುಚ್ಚಿ ಬಾಬುಗೂ ಕಾಲ್ ಶೀಟ್ ಕೊಟ್ಟಿರುವ ಮೆಗಾ ಪ್ರಿನ್ಸ್ ಈಗ ಸುಕುಮಾರ್ ಹೊಸ ಕಥೆಯಲ್ಲಿ ಮಿಂಚೋದಿಕ್ಕೂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಹಾಗೂ ಸುಕುಮಾರ್ ರೈಟಿಂಗ್ ಹಣ ಹಾಕುತ್ತಿರುವ ಈ ಸಿನಿಮಾಗೆ ರಾಕ್ ಸ್ಟಾರ್ ದೇವಿ ಪ್ರಸಾದ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಸೂಪರ್ ಹಿಟ್ ಆದ ರಂಗಸ್ಥಳಂ ಚಿತ್ರಕ್ಕೂ ಮ್ಯೂಸಿಕ್ ನೀಡಿದ್ದ ಡಿಎಸ್ ಪಿ ಮತ್ತೆ ಸುಕುಮಾರ್ ಹಾಗೂ ರಾಮ್ ಸಿನಿಮಾ ಮೂಲಕ ಧಮಾಕ ಎಬ್ಬಿಸಲಿದ್ದಾರೆ. ಅಂದಹಾಗೇ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಈ ಚಿತ್ರ ಮೂಡಿಬರಲಿದೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...