ಉಡುಪಿ: . 50 ವರ್ಷಗಳ ಅವಧಿವರೆಗೆ ಅಧಿಕಾರ ನಡೆಸಿದ ಕಾಂಗ್ರೆಸ್ ಮಾಡಬಾರದ ಹಗರಣಗಳನ್ನೆಲ್ಲ ಮಾಡಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಶಿವಕುಮಾರ್ ತಿಹಾರ್ ಜೈಲಿಗೆ ಬಂದಿದ್ದನ್ನು ಉಲ್ಲೇಖಿಸಿದ ಅವರು, ಬಿಜೆಪಿ ಸರ್ಕಾರ ಭರವಸೆ ನೀಡಿದ್ದ ₹ 15 ಲಕ್ಷ ಎಲ್ಲಿ ಅಂತ ಕೇಳುತ್ತಾರೆ. ಅವರಿಗಿರುವ ಆಸ್ತಿಯನ್ನು ಮಾರಿದರೆ ಎಲ್ಲ ಭಾರತೀಯರಿಗೆ ₹ 15 ಲಕ್ಷ ಸಿಗುತ್ತವೆ ಎಂದು ಯತ್ನಾಳ್ ವ್ಯಂಗ್ಯವಾಡಿದರು.
50 ವರ್ಷಗಳ ಅವಧಿವರೆಗೆ ಅಧಿಕಾರ ನಡೆಸಿದ ಕಾಂಗ್ರೆಸ್ ಮಾಡಬಾರದ ಹಗರಣಗಳನ್ನೆಲ್ಲ ಮಾಡಿದೆ, ಪ್ರಧಾನಿ ನರೇಂದ್ರ ಮೋದಿಯವರ ಈವರೆಗಿನ 10 ವರ್ಷಗಳ ಆಡಳಿತ ಕೇವಲ ಟ್ರೇಲರ್ ಅಗಿದ್ದು ಮುಂದಿನ 5 ವರ್ಷಗಳ ಅವಧಿಯಲ್ಲಿ ಪೂರ್ತಿ ಸಿನಿಮಾ ಅನಾವರಣಗೊಳ್ಳಲಿದೆ ಎಂದು ಹೇಳಿದ ಅವರು ಕೇಜ್ರಿವಾಲ್, ಡಿಂಗ್ರಿವಾಲ್ ಗಳೆಲ್ಲ ಜೈಲು ಸೇರಲಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಬಸನಗೌಡ ಪಾಟೀಲ್ ಯತ್ನಾಳ್
Date: