No menu items!
10.8 C
Munich
Wednesday, April 29, 2026

ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ: ಆರಗ ಜ್ಞಾನೇಂದ್ರ ಹೇಳಿದ್ದೇನು?

Must read

ಬೆಂಗಳೂರು:- ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಮತಿನ್​ ಎಂಬುವನು ಸಿಮ್ ಖರೀದಿಸಿ ಕೊಟ್ಟ ವಿಳಾಸ, ದಾಖಲೆ ದುರುಪಯೋಗ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ತೀರ್ಥಹಳ್ಳಿಯ ಸಾಯಿ ಪ್ರಕಾಶ್​ನನ್ನು ವಿಚಾರಣೆ ಮಾಡಲಾಗಿದ್ದು, ಸತ್ಯಾಂಶ ಗೊತ್ತಾದ ನಂತರ ನಿನ್ನೆ ಎನ್​ಐಎ ತಂಡ ವಾಪಸ್ ಕಳುಹಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೇಸ್​ನಲ್ಲಿ ಬಿಜೆಪಿ ಕಾರ್ಯಕರ್ತರ ಭಾಗಿ ಬಗ್ಗೆ ಅಪಪ್ರಚಾರ ಮಾಡಲಾಗಿದೆ. ತೀರ್ಥಹಳ್ಳಿಯ ಮೊಬೈಲ್ ಅಂಗಡಿಯಲ್ಲಿ ಸಿಮ್ ಖರೀದಿಸಿ 8 ಹಿಂದುಗಳ ಹೆಸರಿನಲ್ಲಿ ಮತಿನ್ ನಕಲಿ ಫೇಸ್​ಬುಕ್ ಅಕೌಂಟ್ ಮಾಡಿದ್ದಾನೆ. ಇವರನ್ನು NIA ತಂಡ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕಿದೆ. ಬಿಜೆಪಿ ಕಾರ್ಯಕರ್ತ ರಾಷ್ಟ್ರವಿರೋಧಿ ಕೃತ್ಯದಲ್ಲಿ ಭಾಗಿ ಆಗಲ್ಲ ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article