ತಾಪಮಾನ ಹೆಚ್ಚಳ – ವೇತನ ಸಹಿತ ಅರ್ಧ ದಿನ ರಜೆಗೆ ಪೌರಕಾರ್ಮಿಕರ ಆಗ್ರಹ !

Date:

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳದಿಂದ ರಾಜಧಾನಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ.

ಅಲ್ಲದೇ ವೇತನ ಸಹಿತ ಅರ್ಧ ದಿನ ರಜೆಗೆ ಪೌರಕಾರ್ಮಿಕರು ಆಗ್ರಹಿಸಿದ್ದಾರೆ.

ಈ ಕುರಿತು ಅಖಿಲ ಭಾರತ ಕಾರ್ಮಿಕ ಸಂಘಗಳ ಒಕ್ಕೂಟವು ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ಪತ್ರ ಬರೆದಿದೆ. ಪೌರಕಾರ್ಮಿಕರಿಗೆ ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳಲು ಹೆಚ್ಚುವರಿ ವಿರಾಮದೊಂದಿಗೆ ಕುಡಿಯುವ ನೀರು, ಒಆರ್‌ಎಸ್ ಮತ್ತು ಮಜ್ಜಿಗೆ ನೀಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಶುದ್ಧ ನೀರು ಮತ್ತು ನೈರ್ಮಲ್ಯದ ಶೌಚಾಲಯಗಳಿಂದ ವಂಚಿತರಾಗಿರುವ ಪೌರಕಾರ್ಮಿಕರು ಶಾಖ-ಸಂಬಂಧಿತ ಕಾಯಿಲೆಗಳಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕಳೆದ ಕೆಲವು ವಾರಗಳಿಂದ ತೀವ್ರತರವಾದ ಶಾಖದಲ್ಲಿ ಕೆಲಸ ಮಾಡುತ್ತಿದ್ದೇವೆ. ಇದರಿಂದ ಹೆಚ್ಚು ದಣಿವಾಗುತ್ತಿದೆ. ಕೆಲವರಿಗೆ ಕೆಲಸದ ವೇಳೆ ಆಯಾಸ, ತಲೆತಿರುಗುವಿಕೆ ಸಮಸ್ಯೆ ಕಾಣಿಸಿಕೊಂಡಿದೆ.

ಪೌರಕಾರ್ಮಿಕರು ಬೆಳಿಗ್ಗೆ 6 ಗಂಟೆಗೆ ಕೆಲಸ ಪ್ರಾರಂಭಿಸುತ್ತಾರೆ. ಪ್ರತಿದಿನ ಮಧ್ಯಾಹ್ನ 2 ಗಂಟೆಯವರೆಗೆ ಕೆಲಸ ಮಾಡುತ್ತಾರೆ. ಕೆಲವೊಮ್ಮೆ ಇದನ್ನು ಮಧ್ಯಾಹ್ನ 2.30 ರವರೆಗೆ ವಿಸ್ತರಿಸಲಾಗುತ್ತದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮಧ್ಯಾಹ್ನ 11ರಿಂದ 3 ಗಂಟೆಯ ಅವಧಿಯಲ್ಲಿ ಮನೆಯೊಳಗೆ ಇರಲು ಸೂಚನೆ ನೀಡಿರುವುದನ್ನು ಉಲ್ಲೇಖಿಸಿ, ಕೆಲಸದ ಸಮಯವನ್ನು ಬೆಳಿಗ್ಗೆ 11 ಕ್ಕೆ ಕಡಿತಗೊಳಿಸಬೇಕೆಂದು ಒಕ್ಕೂಟ ಮನವಿ ಮಾಡಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...